2026-04-23 08:02:44

1 cylinder for 45 days for people in villages: Minister K.H. Muniyappa | ಹಳ್ಳಿಗಳಲ್ಲಿರುವ ಜನರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ | Speed news kannada

1 cylinder for 45 days for people in villages: Minister K.H. Muniyappa | ಹಳ್ಳಿಗಳಲ್ಲಿರುವ ಜನರಿಗೆ  45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ | Speed news kannada

ಮಧ್ಯಪ್ರಾಚ್ಯದಲ್ಲಿ ನಡೆದ ಯುದ್ದದಿಂದಾಗಿ ಭಾರತದಲ್ಲಿ ಗ್ಯಾಸ್‌ ಅಭಾವ ಉಂಟಾಗಿದೆ. ಈ ಬಗ್ಗೆ ರಾಜ್ಯದ ಹೋಟೆಲ್‌ಗಳಿಗೆ ಹೆಚ್ಚುವರಿ ಅಡುಗೆ ಅನಿಲ ನೀಡುವ ಬಗ್ಗೆ ಮಂಗಳವಾರ ಸಭೆ ನಡೆಯಲಿದೆ ಎಂದು ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವ ಕೆ.ಹೆಚ್‌.ಮುನಿಯಪ್ಪ ಹೇಳಿದ್ದಾರೆ. ಹೋಟೆಲ್ ಗಳಿಗೆ ಹೆಚ್ಚುವರಿ ಸಿಲಿಂಡರ್‌ ಕೊಡೋಕೆ ಹೇಳಿದ್ದೇವೆ. ಮಂಗಳವಾರ ಮತ್ತೊಂದು ಸುತ್ತಿನ ಸಭೆಯಿದೆ. ಆ ದಿನ ಇನ್ನೂ ಹೆಚ್ಚುವರಿ ಸಿಲಿಂಡರ್‌ ಕೊಡುವ ಬಗ್ಗೆ ನಿರ್ಧಾರ ಮಾಡ್ತೀವಿ. ವಿನಾಃಕಾರಣ ಜನ ಆತಂಕಕ್ಕೆ ಒಳಗಾಗೋದು ಬೇಡ ಎಂದು ಹೇಳಿದ್ದಾರೆ. ಇನ್ನು ಹಳ್ಳಿಗಳಲ್ಲಿ ವಾಸಿಸುವವರಿಗೆ 45 ದಿನಕ್ಕೆ 1 ಸಿಲಿಂಡರ್‌ ಕೊಡ್ತಿದ್ದೇವೆ. ವಾಣಿಜ್ಯ ಸಿಲಿಂಡರ್‌ ಸಮಸ್ಯೆ ಸರಿಪಡಿಸೋಕೆ ಹೇಳಿದ್ದೇವೆ ಎಂದು ಮುನಿಯಪ್ಪ ತಿಳಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.