2026-07-23 09:32:38

1 cylinder for 45 days for people in villages: Minister K.H. Muniyappa | ಹಳ್ಳಿಗಳಲ್ಲಿರುವ ಜನರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ | Speed news kannada

1 cylinder for 45 days for people in villages: Minister K.H. Muniyappa | ಹಳ್ಳಿಗಳಲ್ಲಿರುವ ಜನರಿಗೆ  45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ | Speed news kannada

ಮಧ್ಯಪ್ರಾಚ್ಯದಲ್ಲಿ ನಡೆದ ಯುದ್ದದಿಂದಾಗಿ ಭಾರತದಲ್ಲಿ ಗ್ಯಾಸ್‌ ಅಭಾವ ಉಂಟಾಗಿದೆ. ಈ ಬಗ್ಗೆ ರಾಜ್ಯದ ಹೋಟೆಲ್‌ಗಳಿಗೆ ಹೆಚ್ಚುವರಿ ಅಡುಗೆ ಅನಿಲ ನೀಡುವ ಬಗ್ಗೆ ಮಂಗಳವಾರ ಸಭೆ ನಡೆಯಲಿದೆ ಎಂದು ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವ ಕೆ.ಹೆಚ್‌.ಮುನಿಯಪ್ಪ ಹೇಳಿದ್ದಾರೆ. ಹೋಟೆಲ್ ಗಳಿಗೆ ಹೆಚ್ಚುವರಿ ಸಿಲಿಂಡರ್‌ ಕೊಡೋಕೆ ಹೇಳಿದ್ದೇವೆ. ಮಂಗಳವಾರ ಮತ್ತೊಂದು ಸುತ್ತಿನ ಸಭೆಯಿದೆ. ಆ ದಿನ ಇನ್ನೂ ಹೆಚ್ಚುವರಿ ಸಿಲಿಂಡರ್‌ ಕೊಡುವ ಬಗ್ಗೆ ನಿರ್ಧಾರ ಮಾಡ್ತೀವಿ. ವಿನಾಃಕಾರಣ ಜನ ಆತಂಕಕ್ಕೆ ಒಳಗಾಗೋದು ಬೇಡ ಎಂದು ಹೇಳಿದ್ದಾರೆ. ಇನ್ನು ಹಳ್ಳಿಗಳಲ್ಲಿ ವಾಸಿಸುವವರಿಗೆ 45 ದಿನಕ್ಕೆ 1 ಸಿಲಿಂಡರ್‌ ಕೊಡ್ತಿದ್ದೇವೆ. ವಾಣಿಜ್ಯ ಸಿಲಿಂಡರ್‌ ಸಮಸ್ಯೆ ಸರಿಪಡಿಸೋಕೆ ಹೇಳಿದ್ದೇವೆ ಎಂದು ಮುನಿಯಪ್ಪ ತಿಳಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.