ಜೋಯಿಡಾ ತಾಲೂಕಿನ ಚಾಪೇಲಿ–ಗವಳಿವಾಡ ಗ್ರಾಮದಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ದುರ್ಘಟನೆ ನಡೆದಿದೆ.ಮೃತ ಬಾಲಕಿಯನ್ನು ಗಂಗು ಗವಳಿ (13) ಎಂದು ಗುರುತಿಸಲಾಗಿದೆ. ಯಾವುದೇ ಆರೋಗ್ಯ ಸಮಸ್ಯೆ ಇಲ್ಲದೆ ಇದ್ದ ಬಾಲಕಿ, ರಾತ್ರಿ ಊಟ ಮಾಡಿ ಮಲಗಿದ ನಂತರ ಬೆಳಿಗ್ಗೆ ವಾಂತಿ ಮಾಡಿಕೊಂಡು ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದ್ದಾಳೆ.ಈ ಸಂಬಂಧ ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.