ಬೆಂಗಳೂರು: ಹುಡುಗಿ ವಿಚಾರಕ್ಕೆ ಯುವಕರ ನಡುವೆ ಗಲಾಟೆ ನಡೆದಿದ್ದು, ಪಿಯುಸಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಲಾಗಿದೆ. ದ್ವೀತಿಯ ಪಿಯುಸಿ (2nd PUC) ಪರೀಕ್ಷೆ ಬರೆಯಲು ಬಂದ ವಿಧ್ಯಾರ್ಥಿ ಮೇಲೆ ಹಲ್ಲೆ ಹಲ್ಲೆ ನಡೆದಿದೆ. ಅನ್ಯಕೋಮಿನ ಹುಡುಗರ ನಡುವೆ ಈ ಘಟನೆ ಸಂಭವಿಸಿದೆ.
ಬೆಂಗಳೂರಿನ ಕೆಆರ್ ಪುರದ ಸಿಲಿಕಾನ್ ಸಿಟಿ ಕಾಲೇಜ್ ಗೇಟ್ ಬಳಿ ಈ ಘಟನೆ ನಡೆದಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಮುಗಿಸಿ ಹೊರಬಂದ ಶ್ರೀ ವೆಂಕಟೇಶ್ವರ ಕಾಲೇಜಿನ ವಿದ್ಯಾರ್ಥಿ ಮೇಲೆ ಪುಂಡರ ಗುಂಪು ಮಾರಕಾಸ್ತ್ರ, ಕಲ್ಲು, ಟೈಲ್ಸ್ ಗಳಿಂದ ಹಲ್ಲೆ ಮಾಡಿದ್ದಾರೆ.
ಕೇವಲ ಓರ್ವ ವಿದ್ಯಾರ್ಥಿ ಮಾತ್ರವಲ್ಲದೇ ಆತನ ಜೊತೆಯಿದ್ದ ಗೆಳೆಯರಿಗೂ ಕೂಡ ಥಳಿಸಲಾಗಿದೆ. ಈ ವೇಳೆ ಹಲ್ಲೆಗೊಳಗಾದ ಯುವಕರು ರಕ್ತ ಸುರಿಸುತ್ತಾ ಸ್ಥಳದಿಂದ ಓಡಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಕೆಆರ್ ಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಲ್ಲೆ ಒಳಗಾದ ವಿದ್ಯಾರ್ಥಿ ಹಾಗೂ ಆತನ ಗೆಳೆಯರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಆ ಬಳಿಕ ಚಿಕಿತ್ಸೆಗೆ ಒಳಪಡಿಸಲಾಗಿದೆ.