2026-03-07 03:36:07

A student who came to write the PUC exam was attacked | ಯುವತಿ ವಿಚಾರಕ್ಕೆ ಕಿರಿಕ್ ಪಿಯುಸಿ ಪರೀಕ್ಷೆ ಬರೆಯಲು ಬಂದ ವಿಧ್ಯಾರ್ಥಿ ಮೇಲೆ ಹಲ್ಲೆ | Speed News Kannada

A student who came to write the PUC exam was attacked | ಯುವತಿ ವಿಚಾರಕ್ಕೆ ಕಿರಿಕ್ ಪಿಯುಸಿ ಪರೀಕ್ಷೆ ಬರೆಯಲು ಬಂದ ವಿಧ್ಯಾರ್ಥಿ ಮೇಲೆ ಹಲ್ಲೆ | Speed News Kannada

ಬೆಂಗಳೂರು: ಹುಡುಗಿ ವಿಚಾರಕ್ಕೆ ಯುವಕರ ನಡುವೆ ಗಲಾಟೆ ನಡೆದಿದ್ದು, ಪಿಯುಸಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಲಾಗಿದೆ. ದ್ವೀತಿಯ ಪಿಯುಸಿ (2nd PUC) ಪರೀಕ್ಷೆ ಬರೆಯಲು ಬಂದ ವಿಧ್ಯಾರ್ಥಿ ಮೇಲೆ ಹಲ್ಲೆ ಹಲ್ಲೆ ನಡೆದಿದೆ. ಅನ್ಯಕೋಮಿನ ಹುಡುಗರ ನಡುವೆ ಈ ಘಟನೆ ಸಂಭವಿಸಿದೆ.
ಬೆಂಗಳೂರಿನ ಕೆಆರ್ ಪುರದ ಸಿಲಿಕಾನ್ ಸಿಟಿ ಕಾಲೇಜ್ ಗೇಟ್ ಬಳಿ ಈ ಘಟನೆ ನಡೆದಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಮುಗಿಸಿ ಹೊರಬಂದ ಶ್ರೀ ವೆಂಕಟೇಶ್ವರ ಕಾಲೇಜಿನ ವಿದ್ಯಾರ್ಥಿ ಮೇಲೆ ಪುಂಡರ ಗುಂಪು ಮಾರಕಾಸ್ತ್ರ, ಕಲ್ಲು, ಟೈಲ್ಸ್ ಗಳಿಂದ ಹಲ್ಲೆ ಮಾಡಿದ್ದಾರೆ.
ಕೇವಲ ಓರ್ವ ವಿದ್ಯಾರ್ಥಿ ಮಾತ್ರವಲ್ಲದೇ ಆತನ ಜೊತೆಯಿದ್ದ ಗೆಳೆಯರಿಗೂ ಕೂಡ ಥಳಿಸಲಾಗಿದೆ. ಈ ವೇಳೆ ಹಲ್ಲೆಗೊಳಗಾದ ಯುವಕರು ರಕ್ತ ಸುರಿಸುತ್ತಾ ಸ್ಥಳದಿಂದ ಓಡಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಕೆಆರ್ ಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಲ್ಲೆ ಒಳಗಾದ ವಿದ್ಯಾರ್ಥಿ ಹಾಗೂ ಆತನ ಗೆಳೆಯರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಆ ಬಳಿಕ ಚಿಕಿತ್ಸೆಗೆ ಒಳಪಡಿಸಲಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.