ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ನಟಿ ರಕ್ಷಿತಾ ತೆರಳಿದ್ದಾರೆ. ಪರಪ್ಪನ ಅಗ್ರಹಾರ ಜೈಲಿಗೆ ಇಬ್ಬರು ಪ್ರತ್ಯೇಕವಾಗಿ ಆಗಮಿಸಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ದರ್ಶನ್ ಅವರೊಂದಿಗೆ ಮಾತುಕತೆ ನಡೆಸಿ ಅವರ ಆರೋಗ್ಯ ವಿಚಾರಿಸಿದ್ದಾರೆ.
ಜೈಲಿನಲ್ಲಿರುವ ಗೆಳೆಯ ದರ್ಶನ್ ರನ್ನ ಎರಡನೇ ಬಾರಿಗೆ ರಕ್ಷಿತಾ ಭೇಟಿ ಮಾಡಿದ್ದು, ಜೈಲಿನಲ್ಲಿ ದರ್ಶನ್ ಪರಿಸ್ಥಿತಿ ಕಂಡು ರಕ್ಷಿತಾ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ. ಗೆಳೆಯನಿಗೆ ಎದುರಾಗಿರುವ ಸಂಕಷ್ಟದ ಬಗ್ಗೆ ರಕ್ಷಿತಾ ಬೇರಸಗೊಂಡಿದ್ದರು. ಭೇಟಿ ಬಳಿಕ ಜೈಲಿನಿಂದ ಬೇಸರದಿಂದಲೇ ರಕ್ಷಿತಾ ಮತ್ತು ದರ್ಶನ್ ಪತ್ನಿ ವಿಜಯಲಕ್ಷ್ಮೀ ಹೊರಬಂದರು.