2026-06-08 01:23:08

Again Bus Strike | ಮತ್ತೆ ಬಸ್‌ ಬಂದ್‌? ಸರ್ಕಾರದ ವಿರುದ್ಧ ಸಾರಿಗೆ ನೌಕರು ಹೋರಾಟಕ್ಕೆ ಫಿಕ್ಸ್‌? | Speed News Kannada

Again Bus Strike | ಮತ್ತೆ ಬಸ್‌ ಬಂದ್‌?  ಸರ್ಕಾರದ ವಿರುದ್ಧ ಸಾರಿಗೆ ನೌಕರು ಹೋರಾಟಕ್ಕೆ ಫಿಕ್ಸ್‌?  | Speed News Kannada

ಬೆಂಗಳೂರು : ಕರ್ನಾಟಕದ ನಾಲ್ಕು ರಸ್ತೆ ಸಾರಿಗೆ ನಿಗಮ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂ ನೌಕರರು ಸರ್ಕಾರದ ವಿರುದ್ಧ ಮತ್ತೆ ಧ್ವನಿ ಎತ್ತಿದ್ದಾರೆ. ಜಂಟಿ ಕ್ರಿಯಾ ಸಮಿತಿ ಜೆಎಸಿ ನೇತೃತ್ವದಲ್ಲಿ ಮತ್ತೆ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗಿದ್ದಾರೆ. 
ಕಳೆದ ತಿಂಗಳು ಪ್ರತಿಭಟನೆಗೆ ಕರೆ ನೀಡಿದ್ದ ನೌಕರರು ಮತ್ತೆ ಇದೀಗ ಈ ತಿಂಗಳಲ್ಲೇ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಜೊತೆಗೆ ಆ ಸಾರಿಗೆ ಬಂದ್ ಮಾಡುವ ಬಗ್ಗೆಯೂ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಜನವರಿ 29ರಂದು ನಿಗದಿಯಾಗಿದ್ದ ಹೋರಾಟವನ್ನು ಎಚ್.ವಿ. ಅನಂತ್ ಸುಬ್ಬರಾವ್ ಅವರ ನಿಧನದಿಂದಾಗಿ ಮುಂದೂಡಲಾಗಿತ್ತು. ಈಗ ಫೆಬ್ರವರಿಯ ಮೂರನೇ ವಾರದಲ್ಲಿ ಹೋರಾಟ ಮುಂದುವರೆಯಲಿದೆ ಎಂದು ಕರೆ ನೀಡಿದ್ದಾರೆ. ನೌಕರರ ಮುಖ್ಯ ಬೇಡಿಕೆಗಳು ಈಡೇರಿದಿದ್ದರೆ ಬಸ್‌ ಬಂದ್‌ ಮಾಡುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ. ಅವರಿಗೆ 38 ತಿಂಗಳ ವೇತನ ಹಿಂಬಾಕಿ ಮತ್ತು 2024 ಜನವರಿ 1ರಿಂದ ಹೊಸ ವೇತನ ಪರಿಷ್ಕರಣೆ ಜಾರಿಯಗಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.