2026-07-23 07:43:55

Appeal for establishment of Vachana Global University | ಬೀದರ್ ಜಿಲ್ಲೆಯಲ್ಲಿ ವಚನ ಗ್ಲೋಬಲ್ ವಿಶ್ವವಿದ್ಯಾಲಯ ಸ್ಥಾಪನೆಗೆ ಮನವಿ | Speed News Kannada

Appeal for establishment of Vachana Global University | ಬೀದರ್ ಜಿಲ್ಲೆಯಲ್ಲಿ ವಚನ ಗ್ಲೋಬಲ್ ವಿಶ್ವವಿದ್ಯಾಲಯ ಸ್ಥಾಪನೆಗೆ ಮನವಿ | Speed News Kannada

ಬೆಂಗಳೂರು: ಬೀದರ್ ಜಿಲ್ಲೆಯಲ್ಲಿ "ವಚನ ಗ್ಲೋಬಲ್ ವಿಶ್ವವಿದ್ಯಾಲಯ" ಸ್ಥಾಪಿಸುವ ನಿಟ್ಟಿನಲ್ಲಿ ಭಾಲ್ಕಿ ಮಠದ ನಾಡೋಜ ಡಾಕ್ಟರ್ ಬಸವಲಿಂಗ ಪಟ್ಟದೇವರು ಅವರ ನೇತೃತ್ವದ ಮಠಾಧೀಶರ ತಂಡ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕಾವೇರಿಯಲ್ಲಿ ಭೇಟಿಯಾಗಿ ಚರ್ಚಿಸಿ ಮನವಿ ಸಲ್ಲಿದರು.
ಈ ಸಂದರ್ಭದಲ್ಲಿ  ಗದಗಿನ ಪೂಜ್ಯ ಶ್ರೀ ಜಗದ್ಗುರು ಡಾ. ತೋಟದ ಸಿದ್ದರಾಮಯ್ಯಗಳು, ಪೂಜಶ್ರೀ ಶಿವಾನಂದ ಮಹಾಸ್ವಾಮಿಗಳು ವಿರಕ್ತಮಠ ಹಂದಿಗುಂದ, ಭಾಲ್ಕಿಯ ಕಿರಿಯ ಶ್ರೀಗಳು, ಕುಂಬಳಗೋಡು ಬಸವ ಮಂಟಪದ ಶ್ರೀಗಳು ಹಾಗೂ ಸಚಿವರಾದ ಎಂ. ಬಿ. ಪಾಟೀಲ್ , ಈಶ್ವರ ಖಂಡ್ರೆ, ಶಾಸಕ ಬಿ.ಆರ್.ಪಾಟೀಲ್ ಉಪಸ್ಥಿತರಿದ್ದರು.
ವಿಶ್ವವಿದ್ಯಾಲಯಕ್ಕೆ 200 ಎಕರೆ ಜಮೀನು ಅವಶ್ಯಕತೆ ಇದ್ದು, ನೂರು ಎಕರೆಯನ್ನು ಒದಗಿಸುವುದಾಗಿ ಬಸವಲಿಂಗ ಪಟ್ಟದೇವರು ಸ್ವಾಮೀಜಿ  ತಿಳಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.