2026-03-07 06:27:44

Appeal to PM from war worried IPL player | ಮನೆಗೆ ಕರೆಸಿಕೊಳ್ಳಿ ಯುದ್ಧದ ಆತಂಕದಲ್ಲಿರುವ IPL ಆಟಗಾರನಿಂದ ಪ್ರಧಾನಿಗೆ ಮನವಿ | Speed News Kannada

Appeal to PM from war worried IPL player | ಮನೆಗೆ ಕರೆಸಿಕೊಳ್ಳಿ ಯುದ್ಧದ ಆತಂಕದಲ್ಲಿರುವ IPL ಆಟಗಾರನಿಂದ ಪ್ರಧಾನಿಗೆ ಮನವಿ | Speed News Kannada

ಮಧ್ಯಪ್ರಾಚ್ಯ ದೇಶಗಳ ನಡುವೆ ಯುದ್ಧದ ತೀವ್ರತೆ ಹೆಚ್ಚಾಗುತ್ತಿದೆ. ಅದರಲ್ಲೂ, ಅಮೆರಿಕ ಮತ್ತು ಇಸ್ರೇಲ್ ದೇಶಗಳು ಜಂಟಿ ಕಾರ್ಯಾಚರಣೆ ನಡೆಸಿ, ಇರಾನ್ನ ಸರ್ವೋಚ್ಚ ನಾಯಕನಾಗಿದ್ದ ಅಯೊಡೊಲ್ಲ ಅಲಿ ಖಮೇನಿ ಅವರನ್ನು ಹತ್ಯೆ ಮಾಡಿದ ಬಳಿಕ, ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಸದ್ಯ, ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಜಾನಿ ಬೈರ್‌ಸ್ಟೋವ್ ಅವರು ತಮ್ಮನ್ನು ದೇಶಕ್ಕೆ ವಾಪಾಸ್ ಕರೆಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಇಂಗ್ಲೆಂಡ್ ಲಯನ್ಸ್ ತಂಡದ ಕೋಚ್ ಆಗಿರುವ ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ವಿವಿಧ ಫ್ರಾಂಚೈಸಿಗಳ ಪರ ಆಡಿರುವ ಜಾನಿ ಬೈರ್‌ಸ್ಟೋವ್ ಅವರು ಅಬುಧಾಬಿಯಲ್ಲಿ ಸಿಲುಕಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ, ಅವರು ತಮ್ಮನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆದುಕೊಂಡು ಹೋಗುವಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರಿಗೆ ಮನವಿ ಮಾಡಿದ್ದಾರೆ.
ಇಂಗ್ಲೆಂಡ್ ಪ್ರಧಾನಿ ಕೀರ್ ಸ್ಟಾರ್‌ಮರ್ ಅವರಿಗೆ ಮನವಿ ಮಾಡಿರುವ ಜಾನಿ ಬೈರ್‌ಸ್ಟೋವ್, 'ನೀವು ನಮ್ಮನ್ನು ಮನೆಗೆ ಕರೆದುಕೊಂಡು ಹೋಗುತ್ತೀರಾ???' ಎಂದು ಎಕ್ಸ್ ಪೋಸ್ಟ್ ಮೂಲಕ ಪ್ರಶ್ನೆ ಮಾಡಿದ್ದಾರೆ. ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯು ಫೆಬ್ರವರಿ 28ರಂದು ನೀಡಿದ ಹೇಳಿಕೆಯಲ್ಲಿ 'ತಂಡದ ಆಟಗಾರರು ಮತ್ತು ಸಿಬ್ಬಂದಿಯ ಭದ್ರತೆ ನಮ್ಮ ಪ್ರಮುಖ ಆದ್ಯತೆಯಾಗಿದೆ. ಮಧ್ಯಪ್ರಾಚ್ಯದಲ್ಲಿನ ಪ್ರಸ್ತುತ ಘಟನೆಗಳಿಗೆ ಸಂಬಂಧಿಸಿದಂತೆ ನಾವು ಭದ್ರತಾ ತಜ್ಞರು ಮತ್ತು ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ. ಅವರು ನೀಡಿರುವ ಸಲಹೆಯನ್ನು ಅನುಸರಿಸುತ್ತೇವೆ' ಎಂದು ಹೇಳಿಕೆ ನೀಡಿತ್ತು. ಜಾನಿ ಬೈರ್‌ಸ್ಟೋವ್ ಅವರು, 'ಎಮಿರೈಟ್ಸ್ ವಿಮಾನ ರದ್ದಾದ ಬಳಿಕ ನಮ್ಮ ಜೊತೆ ಯಾರೂ ಸಂವಹನ ನಡೆಸಿಲ್ಲ, ಸಂಪರ್ಕ ಸಾಧಿಸಿಲು ಪ್ರಯತ್ನಿಸುತ್ತಿದ್ದೇವೆ. ಆದರೆ ಇದುವರೆಗೂ ಅದು ಸಾಧ್ಯವಾಗಿಲ್ಲ' ಎಂದು ಭಾನುವಾರ ಬೆಳಿಗ್ಗೆ ಪೋಸ್ಟ್ ಹಂಚಿಕೊಂಡಿದ್ದರು.
ಈ ಪೋಸ್ಟ್‌ನ ಬಳಿಕ, ಇಂಗ್ಲೆಂಡ್ ಪ್ರಧಾನಿ ಕೀರ್ ಸ್ಟಾರ್‌ಮರ್‌ ಅವರನ್ನು ಉಲ್ಲೇಖಿಸಿ, 'ನೀವು ನಮ್ಮನ್ನು ಮನೆಗೆ ಕರೆದುಕೊಂಡು ಹೋಗುತ್ತೀರಾ?' ಎಂದು ಪ್ರಶ್ನಿಸಿದ್ದಾರೆ. ಐಪಿಎಲ್ 2025ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರ ಆಡಿದ್ದ ಜಾನಿ ಬೈರ್‌ಸ್ಟೋವ್ ಅವರನ್ನು 2026ರ ಐಪಿಎಲ್‌ ಗೂ ಮುನ್ನ ನಡೆದಿರುವ ಮಿನಿ ಹರಾಜಿನಲ್ಲಿ ಅವರನ್ನು ಯಾವುದೇ ತಂಡ ಖರೀದಿಸಿಲ್ಲ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.