2026-03-07 02:07:52

Attack during Hindu Sangam program promotion | ಹಿಂದೂ ಸಂಗಮ ಕಾರ್ಯಕ್ರಮ ಪ್ರಚಾರ ವೇಳೆ ಹಲ್ಲೆ ನಾಲ್ವರ ಬಂಧನ ಯಾರಿವರು | Speed News Kannada

Attack during Hindu Sangam program promotion | ಹಿಂದೂ ಸಂಗಮ ಕಾರ್ಯಕ್ರಮ ಪ್ರಚಾರ ವೇಳೆ ಹಲ್ಲೆ ನಾಲ್ವರ ಬಂಧನ ಯಾರಿವರು | Speed News Kannada

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ಇಂದು ನಡೆಯುತ್ತಿರುವ ಹಿಂದೂ ಸಂಗಮ ಕಾರ್ಯಕ್ರಮ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ದಿಕ್, ಸುಹೆಲ್, ನಾಭಿ, ರಶೀದ್ ಬಂಧಿತರು.
ನಾಪೋಕ್ಲು ಪಟ್ಟಣದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ ಕುರಿತು ಹಿಂದೂ ಯುವಕರು ವಾಹನದಲ್ಲಿ ಸೌಂಡ್ ಬಾಕ್ಸ್ ಕಟ್ಟಿಕೊಂಡು ಪ್ರಚಾರ ಮಾಡುತ್ತಿದ್ದರು ಈ ವೇಳೆ ಕೆಲ ಮುಸ್ಲಿಂ ಯುವಕರು ಈ ಭಾಗದಲ್ಲಿ ಏಕೆ ಪ್ರಚಾರ ಮಾಡುತ್ತಿದ್ದೀರಾ ಎಂದು ತಗಾದೆ ತೆಗೆದಿದ್ದಾರೆ. ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ, ಇವರು ಗೌತಮ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಗೌತಮ್‌ನನನು ಕೂಡಲೇ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕೊಡಗು ಎಸ್‌ ಪಿ ಬಿಂದು ಮಣಿ ಮಾಹಿತಿ ನೀಡಿದ್ದಾರೆ.
ಈ ಹಲ್ಲೆ ಪ್ರಕರಣದಲ್ಲಿ ನಾಪೋಕ್ಲು ಭಾಗದ ಪ್ರಭಾವಿ ಕಾಂಗ್ರೆಸ್ ಮುಖಂಡರೊಬ್ಬರ ಪುತ್ರ ಭಾಗಿಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಹಿಂದೂ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. 
ವಿರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಜಿ ಬೋಪಯ್ಯ ತಕ್ಷಣವೇ ನಾಪೋಕ್ಲು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು. ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಪಡಿಸಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.