2026-05-28 12:22:05

ಬಿಡದಿ: ಹೋರಾಟ ನಿರತ ರೈತರನ್ನು ಭೇಟಿ ಮಾಡಿ ಚರ್ಚಿಸಿದ ನಿಖಿಲ್‌ ಕುಮಾರಸ್ವಾಮಿ | Speed News Kannada

ಬಿಡದಿ: ಹೋರಾಟ ನಿರತ ರೈತರನ್ನು ಭೇಟಿ ಮಾಡಿ ಚರ್ಚಿಸಿದ ನಿಖಿಲ್‌ ಕುಮಾರಸ್ವಾಮಿ | Speed News Kannada

ಬಿಡದಿ: ಬಿಡದಿ ಟೌನ್ ಶಿಪ್ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ ಕಳೆದ 436 ದಿನಗಳಿಂದ ಬಿಡದಿ ಹೋಬಳಿಯ ಬೈರಮಂಗಲದಲ್ಲಿ ಹೋರಾಟ ಮಾಡುತ್ತಿರುವ ರೈತರನ್ನು ಜೆಡಿಎಸ್‌ ಯುವ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಭೇಟಿ ಮಾಡಿ ಚರ್ಚೆ ನಡೆಸಿದರು. ಇಂದು ರೈತರನ್ನು ಭೇಟ ಮಾಡಿದ ಅವರು, ಅವರೊಂದಿಗೆ ಸಂವಾದ ನಡೆಸಿದರು.

ಈ ಭಾಗದಲ್ಲಿ ರೈತರೇ ಇಲ್ಲ! ಈಗಾಗಲೇ ಶೇ.80 ರೈತರು ಯೋಜನೆ ಒಪ್ಪಿದ್ದಾರೆ ಎಂದು ಸುಳ್ಳು ಹೇಳುವ ಸರ್ಕಾರ ನಿಜವಾದ ರೈತರ ಅಳಲನ್ನು ಆಲಿಸದೇ ಇರುವುದು ದುರ್ಧೈವದ ಸಂಗತಿ. "ನನ್ನ ರೈತ ಬಂಧುಗಳು ಯಾವುದೇ ಕಾರಣಕ್ಕೂ ಭಯಪಡಬೇಡಿ. ನಾವೆಲ್ಲರೂ ಕಾನೂನು ಹೋರಾಟ ಮಾಡೋಣ", ಎಂದು ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ. ಎ. ಮಂಜುನಾಥ್, ಜಿಲ್ಲಾಧ್ಯಕ್ಷ ಜಯಮುತ್ತು ಅವರು ಹಾಗೂ ರೈತ ಮುಖಂಡರು, ಉಪಸ್ಥಿತರಿದ್ದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.