2026-07-23 09:11:08

Big good news for transport workers|ಸಾರಿಗೆ ನೌಕರರಿಗೆ ಬಿಗ್ ಗುಡ್‌ನ್ಯೂಸ್|Speed News Kannada

Big good news for transport workers|ಸಾರಿಗೆ ನೌಕರರಿಗೆ ಬಿಗ್ ಗುಡ್‌ನ್ಯೂಸ್|Speed News Kannada

ದೀರ್ಘಕಾಲದ ಬೇಡಿಕೆ ಮತ್ತು ಹೋರಾಟಗಳ ಬಳಿಕ, ರಾಜ್ಯ ಸರ್ಕಾರವು ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ನಾಲ್ಕು ಸಾರಿಗೆ ನಿಗಮಗಳ ನೌಕರರ ಬಾಕಿ ವೇತನ ಹಿಂಬಾಕಿಯನ್ನು  ಪಾವತಿಸಲು ಮೊದಲ ಹಂತವಾಗಿ ₹450 ಕೋಟಿ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ. ಕೆಎಸ್‌ಆರ್‌ಟಿಸಿ  ₹143.85 ಕೋಟಿ, ಬಿಎಂಟಿಸಿ ₹137.24 ಕೋಟಿ, ವಾಯುವ್ಯ ಕರ್ನಾಟಕ ಸಾರಿಗೆ ₹87.00 ಕೋಟಿ,ಕಲ್ಯಾಣ ಕರ್ನಾಟಕ ಸಾರಿಗೆ ₹81.91 ಕೋಟಿ.

ಒಟ್ಟು 26 ತಿಂಗಳ ವೇತನ ಬಾಕಿಯಾಗಿ ₹1,271.92 ಕೋಟಿ ಪಾವತಿಸಬೇಕಿದ್ದು, ಪ್ರಸ್ತುತ ಲಭ್ಯವಿರುವ ಹಣಕಾಸಿನ ಆಧಾರದಲ್ಲಿ ಈ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ಸರ್ಕಾರ ಮೊದಲ ಹಂತದ ಹಣ ಬಿಡುಗಡೆ ಮಾಡಿರುವುದನ್ನು ನೌಕರರ ಸಂಘಟನೆಗಳು ಸ್ವಾಗತಿಸಿವೆ. ಆದಾಗ್ಯೂ, ಬಾಕಿ ಇರುವ ಉಳಿದ ₹821.92 ಕೋಟಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ನೌಕರರ ಒಕ್ಕೂಟಗಳು ಒತ್ತಾಯಿಸಿವೆ. ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನೂ ನೌಕರರು ನೀಡಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.