2026-04-24 02:55:43

Bike collides with bus over love breakup, youth burnt alive|ಲವ್ ಬ್ರೇಕಪ್ ಹಿನ್ನೆಲೆ ಬೈಕ್ ಬಸ್‌ಗೆ ಡಿಕ್ಕಿ, ಯುವಕ ಸಜೀವ ದಹನ|Speed News Kannada

Bike collides with bus over love breakup, youth burnt alive|ಲವ್ ಬ್ರೇಕಪ್ ಹಿನ್ನೆಲೆ ಬೈಕ್ ಬಸ್‌ಗೆ ಡಿಕ್ಕಿ, ಯುವಕ ಸಜೀವ ದಹನ|Speed News Kannada

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಹೃದಯ ಕಲುಕುವ ಘಟನೆ ನಡೆದಿದ್ದು, ಲವ್ ಬ್ರೇಕಪ್ ಹಿನ್ನೆಲೆ ಯುವಕ ಆತ್ಮಹತ್ಯೆಗೆ ಶರಣಾದ ದುರ್ಘಟನೆ ನಡೆದಿದೆ. ಕನ್ನೊಳ್ಳಿ ಟೋಲ್‌ಗೇಟ್ ಬಳಿ 19 ವರ್ಷದ ಅಭಿಷೇಕ ಸೈಬಗೌಡ ನಾಗರಳ್ಳಿ ತನ್ನ ಬೈಕ್ ಅನ್ನು ಸರ್ಕಾರಿ ಬಸ್‌ಗೆ ಡಿಕ್ಕಿ ಹೊಡೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಡಿಕ್ಕಿ ಹೊಡೆದ ಪರಿಣಾಮ ಬೈಕ್‌ಗೆ ಬೆಂಕಿ ಹೊತ್ತಿಕೊಂಡು, ಬಳಿಕ ಬಸ್‌ಗೂ ಬೆಂಕಿ ಆವರಿಸಿಕೊಂಡಿದ್ದು, ಯುವಕ ಸಜೀವ ದಹನಗೊಂಡಿದ್ದಾನೆ. ಪ್ರಯಾಣಿಕರು ತಕ್ಷಣ ಬಸ್ಸಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಆತ್ಮಹತ್ಯೆಗೂ ಮುನ್ನ ಯುವಕ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.