2026-05-14 05:00:41

cabinet reshuffle is under consideration;cm siddaramaiah| ಸಂಪುಟ ಪುನರ್‌ ರಚನೆ ಇಂಗಿತ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ| Speed News Kannada

cabinet reshuffle is under consideration;cm siddaramaiah| ಸಂಪುಟ ಪುನರ್‌ ರಚನೆ ಇಂಗಿತ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ| Speed News Kannada

ಮೈಸೂರು: ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ  ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಹೊಸದಾಗಿ ಮಾಡುವಂತಿಲ್ಲ ಮುಖ್ಯಮಂತ್ರಿ  ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಧಾರ್ಮಿಕ ಸಂಕೇತಗಳ ವಿಚಾರದಲ್ಲಿ ಬಿಜೆಪಿ ಎತ್ತಿರುವ ತಕರಾರಿಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಮುಖ್ಯಮಂತ್ರಿಗಳು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿಯವರು ಡೀಸಲ್ ಬಳಕೆ ಕಡಿತಗೊಳಿಸಲು ತಮ್ಮ ಬೆಂಗಾವಲನ್ನು ಕಡಿತಗೊಳಿಸಿದ್ದು ಈ  ಬಗ್ಗೆ ಕರ್ನಾಟಕದಲ್ಲಿಯೂ ಮಾಡಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅದು ಕೇವಲ ತಾತ್ಕಾಲಿಕ ಕ್ರಮವಷ್ಟೇ.  ಪ್ರಧಾನಿಗಳು ಹೇಳಿರುವುದು ಸರಿಯಾದ ಕ್ರಮವಲ್ಲ. ಅದಕ್ಕೆ ಬದಲು ಬೇರೆ ದೇಶಗಳೊಂದಿಗೆ ಮಾತನಾಡಿ ಒಮ್ಮತಕ್ಕೆ ಬರುವುದು ಸೂಕ್ತ ಎಂದರು.

ಸಂಪುಟ ಪುನರ್ ರಚನೆ:

ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಪ್ರಯಾಣ ಬೆಳಸುತ್ತೀರಾ ಎಂಬ  ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಸಂಪುಟ ಪುನರ್ ರಚನೆ ಮಾಡುವ ಉದ್ದೇಶವಿದೆ ಎಂದರು.

ನೀಟ್ ಪ್ರಶ್ನೆ ಪತ್ರಿಕೆ ಉತ್ತರ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಮಾತನಾಡಿ ನೀಟ್ ಕೇಂದ್ರ ಸರ್ಕಾರ ಪರೀಕ್ಷೆಯನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ.ಇದರಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.