2026-06-08 08:01:29

Chief Secretary denies Snehamayi Krishnas allegations | ಲಂಚ ಸ್ನೇಹಮಯಿ ಕೃಷ್ಣ ಆರೋಪ ನಿರಾಕರಿಸಿದ ಮುಖ್ಯ ಕಾರ್ಯದರ್ಶಿ | Speed News Kannada

Chief Secretary denies Snehamayi Krishnas allegations | ಲಂಚ ಸ್ನೇಹಮಯಿ ಕೃಷ್ಣ ಆರೋಪ ನಿರಾಕರಿಸಿದ ಮುಖ್ಯ ಕಾರ್ಯದರ್ಶಿ | Speed News Kannada

ಬೆಂಗಳೂರು: ಮೈಸೂರು ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್ ಅವರಿಗೆ ನಿಯಾಮನುಸಾರವಾಗಿಯೇ ಮುಂಬಡ್ತಿ ನೀಡಲಾಗಿದೆ ಎಂದು ರಾಜ್ಯ ಸರ್ಕಾರದ  ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ ಸ್ಪಷ್ಟನೆ ನೀಡಿದ್ದಾರೆ.
ಮುಖ್ಯಕಾರ್ಯದರ್ಶಿಗಳು ಲಂಚ ತೆಗೆದುಕೊಂಡು ನಟೇಶ್‌ ಅವರಿಗೆ ಮುಂಬಡ್ತಿ ನೀಡಿದ್ದಾರೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಆರೋಪ ಮಾಡಿದ್ದರು.
ಈ ಆರೋಪಕ್ಕೆ ಯಾವುದೇ ಆಧಾರ ಇಲ್ಲ. ಸುಳ್ಳು ಮತ್ತು ಕ್ಷುಲ್ಲಕ ಆರೋಪಗಳಾಗಿವೆ. ಆಧಾರರಹಿತ ಆರೋಪ ಮಡಿರುವುದಕ್ಕೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ದೂರುದಾರರು ತಮ್ಮ ಆರೋಪಕ್ಕೆ ಯಾವುದೇ ಪೂರಕ ದಾಖಲೆಗಳನ್ನು ಸಲ್ಲಿಸಿರುವುದಿಲ್ಲ. ಒಂದು ವೇಳೆ ಸೂಕ್ತ ದಾಖಲೆ ಒದಗಿಸಿದರೆ ನಿಯಮಾನುಸಾರ ಪರಿಶೀಲಿಸಿ ಕ್ರಮಕೈಗೊಳ್ಳಲಾಗುತ್ತದೆ ಎಂದೂ ಶಾಲಿನಿ ರಜನೀಶ್‌ ತಿಳಿಸಿದ್ದಾರೆ

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.