2026-06-08 01:23:03

CM Change | Dr Yathindra Siddaramaiah | ಸಿಎಂ ಬದಲಾವಣೆ: ಹೈಕಮಾಂಡ್‌ ಇದುವರೆಗೂ ಏನನ್ನೂ ಹೇಳಿಲ್ಲ: ಡಾ.ಯತೀಂದ್ರ ಸಿದ್ದರಾಮಯ್ಯ| SNK

CM Change | Dr Yathindra Siddaramaiah | ಸಿಎಂ ಬದಲಾವಣೆ: ಹೈಕಮಾಂಡ್‌ ಇದುವರೆಗೂ ಏನನ್ನೂ ಹೇಳಿಲ್ಲ: ಡಾ.ಯತೀಂದ್ರ ಸಿದ್ದರಾಮಯ್ಯ| SNK

ಬೀದರ್:‌ ಮುಖ್ಯಮಂತ್ರಿ ಹುದ್ದೆ ಕುರಿತು ಹೈಕಮಾಂಡ್‌ ಯಾವುದೇ ಪ್ರಸ್ತಾಪ ಮಾಡಿಲ್ಲವಾದ್ದರಿಂದ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. 
ಬೀದರ್‌ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ ಹೈಕಮಾಂಡೇ, ಅದರಲ್ಲಿ ಎರಡನೇ ಮಾತಿಲ್ಲ. ಹೈಕಮಾಂಡ್‌ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು. ನಾನು ಮೊನ್ನೆಯೂ ಇದನ್ನೇ ಹೇಳೀರುವೆ. ಈಗಲೂ ಅದನ್ನೇ ಪ್ರತಿಪಾದಿಸುವೆ ಎಂದರು.
ಎಲ್ಲ ಪಕ್ಷಗಳಲ್ಲೂ ಸಿಎಂ ಹುದ್ದೆಗೆ ಅನೇಕ ಆಕಾಂಕ್ಷಿಗಳು ಇರುತ್ತಾರೆ. ಆದರೆ ಅಂತಿಮ ತೀರ್ಮಾನವನ್ನು ಹೈಕಮಾಂಡ್‌ ತೆಗೆದುಕೊಳ್ಳಲಿದೆ ಎಂದು ಯತೀಂದ್ರ ತಿಳಿಸಿದರು.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.