2026-03-07 12:45:59

College student dies in wild elephant attack | ಕಾಲೇಜು ವಿದ್ಯಾರ್ಥಿನಿ ಸಾವು ಕಾಡಾನೆ ದಾಳಿ | Speed News Kannada

College student dies in wild elephant attack | ಕಾಲೇಜು ವಿದ್ಯಾರ್ಥಿನಿ ಸಾವು ಕಾಡಾನೆ ದಾಳಿ | Speed News Kannada

ಮಡಿಕೇರಿ : ಇತ್ತೀಚಿಗೆ ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆ ಹಾವಳಿ ಮಿತಿಮೀರಿದೆ. ಮಡಿಕೇರಿಯಲ್ಲಿ ಜನರು ಆತಂಕದಿಂದ ಬದುಕುವಂತಾಗಿದೆ.
ಮಡಿಕೇರಿ ತಾಲ್ಲೂಕಿನ ಕಾಡಂಚಿನ ಗ್ರಾಮ ಬೆಟ್ಟತ್ತೂರಿನಲ್ಲಿ ಕಾಡಾನೆ ದಾಳಿಗೆ ೧೭ ವರ್ಷದ ದ್ವಿತೀಯ ಪಿಯು ವಿದ್ಯಾರ್ಥಿನಿ ಪೂಜಾ ಸಿಲುಕಿ ಮೃತಪಟ್ಟಿದ್ದಾರೆ. ಕಳೆದ 2 ವರ್ಷದ ಹಿಂದೆ ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಇರಲಿಲ್ಲ. ವಿದ್ಯಾರ್ಥಿನಿಯ ಮನೆಯ 100 ಮೀಟರ್ ವ್ಯಾಪ್ತಿಯಲ್ಲಿ ಅರಣ್ಯ ಇದೆ. ಒಂಟಿ ಆನೆ ಈ ದಾಳಿ ನಡೆಸಿದೆ.
ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆತರುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ಡಿಸಿಎಫ್ ಅಭಿಷೇಕ್ ಮಾಹಿತಿ ನೀಡಿದ್ದಾರೆ.
ಕಾಡಾನೆ ದಾಳಿ ತಡೆಯಲು ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಬೆಟ್ಟತ್ತೂರು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.  ಕಾಡಾನೆಯಿಂದ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.