2026-03-07 05:05:08

Congress Leader Attacked By Men Wearing Taltars | ಕಾಂಗ್ರೆಸ್ ಮುಖಂಡನ ಮೇಲೆ ತಲ್ಟಾರ್ ಧಾರಿಗಳಿಂದ ಹಲ್ಲೆ- ಬೆಚ್ಚಿಬಿದ್ದ ಉಡುಪಿ! | Speed News Kannada

Congress Leader Attacked By Men Wearing Taltars | ಕಾಂಗ್ರೆಸ್ ಮುಖಂಡನ ಮೇಲೆ ತಲ್ಟಾರ್ ಧಾರಿಗಳಿಂದ ಹಲ್ಲೆ- ಬೆಚ್ಚಿಬಿದ್ದ ಉಡುಪಿ! | Speed News Kannada

ಉಡುಪಿ : ಕೃಷ್ಣನಗರಿ ಉಡುಪಿಯಲ್ಲಿ ಮಚ್ಚು ಹಾಗೂ ಲಾಂಗು ಸದ್ದು ಮಾಡಿದ್ದು, ಕಾಂಗ್ರೆಸ್ ಯುವ ಮುಖಂಡನ ಮೇಲೆ ಹಲ್ಲೆ ನಡೆಸಲಾಗಿದೆ.ನಗರದ ಪಿಪಿಸಿ ಕ್ರಾಸ್ ಬಳಿ ದಾಳಿ ನಡೆಸಲಾಗಿದ್ದು, ಮಾತುಕತೆಗೆಂದು ಕರೆಸಿ ಅಟ್ಯಾಕ್ ಮಾಡಲಾಗಿದೆ.
NSUI ಉಪಾಧ್ಯಕ್ಷ ಶರತ್ ಕುಂದರ್ ಗಂಭೀರ ಗಾಯಗೊಂಡಿದ್ದು, 6-7 ದುಷ್ಕರ್ಮಿಗಳ ತಂಡದಿಂದ ದಾಳಿ ನಡೆದಿದೆ. ಮಣಿಪಾಲ ಹೋಟೆಲ್‌ನಲ್ಲಿ ನಡೆದ ಗಲಾಟೆಯ ಮುಂದುವರಿದ ಭಾಗವಾಗಿ ಈ ಘಟನೆ ನಡೆದಿರುವ ಮಾಹಿತಿ ಇದೆ.
ಟಾಟಾ ಸಫಾರಿ, ಮಹೀಂದ್ರ ಥಾರ್ ವಾಹನಗಳಲ್ಲಿ ಬಂದ ಆರೋಪಿಗಳು, ತಲ್ವಾರಿನಿಂದ ದಾಳಿ ನಡೆಸಿ ಕೊಲೆ ಯತ್ನ ನಡೆಸಿದ್ದಾರೆ. ಜೊತೆಗೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆಂಬ ಆರೋಪ ಕೇಳಿಬಂದಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಖಾಕಿ ಹುಡುಕಾಟ ನಡೆಸುತ್ತಿದ್ದು, ಘಟನೆ ಸಂಬಂಧ ತನಿಖೆ ಮುಂದುವರಿದಿದೆ. ರಾಜಕೀಯ ಕಾರಣವೂ ಒಳಗೊಂಡಂತೆ ವೈಯಕ್ತಿಕ ದ್ವೇಷಕ್ಕೆ ಅಟ್ಯಾಕ್ ನಡೆದಿದೆ ಎಂದು ಪೋಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.