2026-04-24 12:19:25

Davanagere by election | ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್‌ನಿಂದ ಹಿಂದೆ ಸರಿದ ಜಮೀರ್‌ | Speed news kannada

Davanagere by election | ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್‌ನಿಂದ ಹಿಂದೆ ಸರಿದ ಜಮೀರ್‌ | Speed news kannada

ಏಪ್ರಿಲ್‌ 9ರಂದು ನಡೆಯುವ ದಾವಣಗೆರೆ ದಕ್ಷಿಣ ಉಪಚುನಾವಣೆಗೆ ಮುಸ್ಲಿಂ ಮುಖಂಡ ಸಾದಿಕ್‌ ಪೈಲ್ವಾನ್‌ ಅವರಿಗೆ ಟಿಕೆಟ್‌ ನೀಡಬೇಕೆಂದು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಒತ್ತಾಹಿಸಿದ್ದರು.  ಆದರೆ ಕಾಂಗ್ರೆಸ್‌ ಮುಸ್ಲಿಂ ಸಮುದಾಯಕ್ಕೆ ಟಿಕೆಟ್‌ ನೀಡದಿದ್ದರಿಂದ ಜಮೀರ್‌ ಅಸಮದಾನಗೊಂಡಿದ್ದು ಚುನಾವಣಾ ಪ್ರಚಾರದಿಂದ ದೂರ ಇದ್ದಾರೆ.  ಸಾದಿಕ್‌ ಬಂಡಾಯವಾಗಿ ಸ್ಪರ್ಧಿಸಲು ಜಮೀರ್‌ ಕಾರಣ ಎನ್ನುವ ಮಾತುಗಳು ಕೇಳಿಬಂದಿತ್ತು. ಈ ಎಲ್ಲಾ ಗೊಂದಲಗಳ ಹೊರತಾಗಿಯೂ ಸಿಎಂ ಸಿದ್ದರಾಮಯ್ಯ ಮಧ್ಯಸ್ಥಿಕೆಯಲ್ಲಿ ಜಮೀರ್‌ ಸಮರ್ಥ್‌ ಪರವಾಗಿ ಪ್ರಚಾರ ಕೈಗೊಳ್ಳಲು ಮುಂದಾಗಿದ್ದರು. ಬೂದಿ ಮುಚ್ಚಿದ ಕೆಂಡದಂತಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯಕ್ಕೆ ಸಚಿವ ಮಲ್ಲಿಕಾರ್ಜುನ್ ಅವರ ‘ಜಮೀರ್ ಬರುವುದಕ್ಕಿಂತ ಬಾರದಿರುವುದೇ ಒಳ್ಳೆಯದು’ ಎನ್ನುವ ಹೇಳಿಕೆ ಮತ್ತೆ ಕಿಡಿ ಹೊತ್ತಿಸಿದೆ

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.