2026-03-07 05:14:23

DCM Shivakumar Going To Meet His Superiors Tomorrow | ನಾಳೆ ದೆಹಲಿಗೆ ಡಿಸಿಎಂ ಶಿವಕುಮಾರ್ ವರಿಷ್ಠರ ಭೇಟಿಗೆ ಅವಕಾಶ ಸಿಗಲಿದೆಯೇ? | Speed News Kannada

DCM Shivakumar Going To Meet His Superiors Tomorrow |  ನಾಳೆ ದೆಹಲಿಗೆ ಡಿಸಿಎಂ ಶಿವಕುಮಾರ್ ವರಿಷ್ಠರ ಭೇಟಿಗೆ ಅವಕಾಶ ಸಿಗಲಿದೆಯೇ? | Speed News Kannada

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನಾಳೆ ದೆಹಲಿಗೆ ಪ್ರವಾಸ ಕೈಗೊಂಡಿದ್ದಾರೆ.
ನಾಳೆ ಬೆಳಗ್ಗೆ 9.50ರ ವಿಮಾನದಲ್ಲಿ ಶಿವಕುಮಾರ್ ತೆರಳುತ್ತಿದ್ದಾರೆ. ಅಸ್ಸಾಂ ವಿಧಾನಸಭಾ ಚುನಾವಣೆ ಸಂಬಂಧ ಪ್ರಿಯಾಂಕ್ ಗಾಂಧಿ ಅವರು ಪ್ರಮುಖ ಮುಖಂಡರ ಸಭೆ ಕರೆದಿದ್ದು, ಈ ಸಭೆಯಲ್ಲಿ ಶಿವಕುಮಾರ್‌ ಭಾಗವಹಿಸಲಿದ್ದಾರೆ.
ಹಾಗೆಯೇ ಅವರು ಪ್ರಿಯಾಂಕಾ ಗಾಂಧಿ, ರಾಹುಲ್‌ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನೂ ಭೇಟಿ ಮಾಡುವ ಸಾಧ್ಯತೆಗಳಿವೆ. ಅಧಿಕಾರ ಹಸ್ತಾಂತರ ಕುರಿತು ಒತ್ತಡ ಹೇರಲಿದ್ದು, ಅವಕಾಶ ನೀಡುವಂತೆ ಮತ್ತೊಮ್ಮೆ ಕೋರಲಿದ್ದಾರೆ. 
ಈ ಹಿಂದೆ ಅವರು ದೆಹಲಿಗೆ ಭೇಟಿ ನೀಡಿದಾಗ ವರಿಷ್ಠರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಸಂಸತ್‌ ಆಧಿವೇಶನ ನಡೆಯುತ್ತಿದ್ದು, ವರಿಷ್ಠರು ಬೇಟಿಗೆ ಅವಕಾಶ ನೀಡಲಿದ್ದಾರೆಯೇ ಎನ್ನುವ ಮಾಹಿತಿ ಲಭ್ಯವಾಗಿಲ್ಲ. 
ಈ ಸಂಬಂಧ ಪ್ರತಿಕ್ರಿಯಿಸಿರುವ ಶಿವಕುಮಾರ್‌ ಅವರು, ಹೈಕಮಾಂಡ್ ನವರು ಕರೆದಿದ್ದಾರೆ. ಪಕ್ಷದ ನಾಯಕರನ್ನ ಭೇಟಿ ಮಾಡುವುದು ನಮ್ಮ ಕರ್ತವ್ಯ. ದೆಹಲಿಗೆ ತೆರಳಲು ನಾನು ಸಿಎಂ ಅವರ ಅನುಮತಿ ತೆಗೆದುಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.