ರಾಜಧಾನಿ ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಮುಂಜಾನೆ ಭೀಕರ ಬೆಂಕಿ ಅವಘಡ ಸಂಭವಿಸಿ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ.ಬೆಳಗಿನ 4 ಗಂಟೆ ಸುಮಾರಿಗೆ ಆರಂಭವಾದ ಬೆಂಕಿ ಕ್ಷಣಾರ್ಧದಲ್ಲಿ ಮೇಲಿನ ಮಹಡಿಗಳಿಗೆ ವ್ಯಾಪಿಸಿದ್ದು, 14 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತಂದವು.
ಹಲವರನ್ನು ರಕ್ಷಿಸಲಾಗಿದ್ದು, ಗಾಯಾಳುಗಳನ್ನು ಗುರು ತೆಗ್ ಬಹುದುರ್ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿಗೆ ನಿಖರ ಕಾರಣ ತಿಳಿದುಬಂದಿಲ್ಲ, ಆದರೆ ಎಸಿ ಸ್ಫೋಟದಿಂದ ಅವಘಡ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.