ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರುವರಿ 26ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ರಿಲಯನ್ಸ್ ಸಮೂಹದ ಮುಖ್ಯಸ್ಥ ಅನಿಲ್ ಅಂಬಾನಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಹೊಸ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ.
ಈ ಹಿಂದೆ ಫೆಬ್ರುವರಿ 10 ಮತ್ತು 17ರಂದು ವಿಚಾರಣೆಗೆ ಹಾಜರಾಗುವಂತೆ ಅನಿಲ್ ಅಂಬಾನಿ ಮತ್ತುಅವರ ಪತ್ನಿ ಟೀನಾ ಅಂಬಾನಿಗೆ ಇ.ಡಿ ಸೂಚಿಸಿತ್ತು. ಆದರೆ, ಅವರು ಹಾಜರಾಗಿರಲಿಲ್ಲ. ಟೀನಾ ಅವರನ್ನೂ ವಿಚಾರಣೆಗೆ ಕರೆದಿದೆಯೇ ಎಂದು ಖಚಿತವಾಗಿಲ್ಲ.
ರಿಲಯನ್ಸ್ ಸಮೂಹ ಮತ್ತು ಅದರ ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಅಂಬಾನಿ ಅವರನ್ನು ಕಳೆದ ವರ್ಷ ಇಡಿ ವಿಚಾರಣೆ ನಡೆಸಿತ್ತು.
ಅನಿಲ್ ಧೀರೂಭಾಯಿ ಅಂಬಾನಿ ಸಮೂಹದ ವಿರುದ್ಧದ ಬ್ಯಾಂಕ್ ವಂಚನೆ ಮತ್ತು ಅವ್ಯವಹಾರ ಪ್ರಕರಣಗಳ ಕುರಿತ ತನಿಖೆಗೆ ಇ.ಡಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.