2026-06-25 03:46:18

Farmer commits suicide after being threatened by Gram Panchayat members | ಗ್ರಾಮ ಪಂಚಾಯತ್ ಸದಸ್ಯರಿಂದ ಧಮ್ಮಿ ಸುಳ್ಳು ಕೇಸ್‌ಗೆ ಬೆದರಿ ರೈತ ಆತ್ಮಹ*ತ್ಯೆ | Speed News Kannada

Farmer commits suicide after being threatened by Gram Panchayat members | ಗ್ರಾಮ ಪಂಚಾಯತ್ ಸದಸ್ಯರಿಂದ ಧಮ್ಮಿ ಸುಳ್ಳು ಕೇಸ್‌ಗೆ ಬೆದರಿ ರೈತ ಆತ್ಮಹ*ತ್ಯೆ | Speed News Kannada

ಹುಬ್ಬಳ್ಳಿ : ಇಲ್ಲಿನ ಉಮಚಗಿ ಗ್ರಾಮದಲ್ಲಿ ರೈತ ನಿಂಗಪ್ಪ ಅಂಗಡಿ (48) ಆತ್ಮಹತ್ಯೆಗೆ ಶರಣಾಗಿದ್ದಾರೆ. ಗ್ರಾಮದ ರಸ್ತೆ ವಿಚಾರವಾಗಿ ಉಂಟಾದ ತಕರಾರು ಈ ಘಟನೆಗೆ ಕಾರಣ ಎನ್ನಲಾಗಿದೆ. ಈ ವಿಚಾರದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಅಟ್ರಾಸಿಟಿ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ ಹಿನ್ನೆಲೆ ರೈತ ನಿಂಗಪ್ಪ ಆತಂಕಗೊಂಡಿದ್ದಾರೆ ಎನ್ನಲಾಗಿದೆ. ಹುಬ್ಬಳ್ಳಿಯ ಉಮಚಗಿ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ನಿಂಗಪ್ಪ ನಡುವೆ ವಾಗ್ವಾದ ನಡೆದಿದ್ದು ರಸ್ತೆ ವಿಚಾರಕ್ಕೆ ತಗಾದೆ ಶುರುವಾಗಿದೆ. ಆದ್ರೆ ಈ ವೇಳೆ ಗ್ರಾ.ಪಂ ಸದಸ್ಯರು ಅಟ್ರಾಸಿಟಿ ಕೇಸ್ ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ. ಇದ್ರಿಂದ ನಿಂಗಪ್ಪ ಚಿಂತೆಗೀಡಾಗಿದ್ದ ಎನ್ನಲಾಗಿದೆ. ಹೀಗಾಗಿ ಇದೇ ಆತಂಕದಲ್ಲಿ ತನ್ನ ಜಮೀನಿನಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ರೈತ ನಿಂಗಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.