ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ದೇವಿಯ ಆಶೀರ್ವಾದ ಪಡೆದರು.ದೇವಾಲಯದ ಆವರಣವನ್ನು ವೀಕ್ಷಿಸಿದ ಸಚಿವರು, ಗರುಡಗಂಭದ ಬಳಿ ಅರ್ಚಕರೊಂದಿಗೆ ಫೋಟೋ ತೆಗೆಸಿಕೊಂಡರು. ಬಳಿಕ ದೇವಾಲಯದ ಆಡಳಿತ ಮಂಡಳಿಯಿಂದ ಅವರನ್ನು ಗೌರವಿಸಲಾಯಿತು.ದೇವಾಲಯದ ದರ್ಶನದ ಬಳಿಕ, ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳಿದರು.