ಬೆಂಗಳೂರು: ವಿವಾದಿತ ದ್ವೇಷ ಭಾಷಣ ವಿಧೇಯಕಕ್ಕೆ ರಾಜ್ಯಪಾಲರು ಬ್ರೇಕ್ ಹಾಕಿದ್ದಾರೆ. ಸಹಿ ಹಾಕದೇ ರಾಷ್ಟ್ರಪತಿಗಳಿಗೆ ರವಾನೆ ಮಾಡಿದ್ದಾರೆ. ಇದರಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ.
ರಾಜ್ಯಪಾಲರ ಈ ನಿರ್ಧಾರ ಸರ್ಕಾರದಿಂದ ತೀವ್ರ ಟೀಕೆಗೆ ಗುರಿಯಾಗಿದ್ದು, ಸರ್ಕಾರದ ರಾಜಕೀಯ ದುರುದ್ದೇಶಕ್ಕೆ ಹಿನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ. ವಿಧೇಯಕದಲ್ಲಿ ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಕಠಿಣ ಕಾನೂನುಗಳನ್ನು ಪರಿಚಯಿಸಲಾಗಿತ್ತು.
ಥಾವರಚಂದ್ ಗೆಹ್ಲೋಟ್ ಈ ದ್ವೇಷ ಭಾಷಣ ವಿಧೇಯಕಕ್ಕೆ ಸಹಿ ಹಾಕದೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರವಾನೆ ಮಾಡಿದ್ದಾರೆ. ಆದರೆ ವಿಧೇಯಕ ಸಂವಿಧಾನದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂದು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರೆ. ಇದರಿಂದ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ