2026-03-07 12:12:55

govt posts fill gradually; cm assurance ಖಾಲಿ ಇರುವ ಹುದ್ದೆ:ಹಂತ ಹಂತವಾಗಿ ಭರ್ತಿ:ಸಿಎಂ ಸಿದ್ದರಾಮಯ್ಯ ಭರವಸೆ Speed News Kannada

govt posts fill gradually; cm assurance ಖಾಲಿ ಇರುವ ಹುದ್ದೆ:ಹಂತ ಹಂತವಾಗಿ ಭರ್ತಿ:ಸಿಎಂ  ಸಿದ್ದರಾಮಯ್ಯ ಭರವಸೆ Speed News Kannada

ಉಡುಪಿ: ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾರ್ಕಾಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಉದ್ಯೋಗ ಒದಗಿಸುವ ಭರವಸೆಯನ್ನು ಸರ್ಕಾರ ನೀಡುತ್ತದೆ. ಒಳಮೀಸಲಾತಿಯ ಕಾರಣ ನೇಮಕಾತಿ ಪ್ರಕ್ರಿಯೆ ವಿಳಂಬವಾಯಿತು. ಪ್ರಸ್ತುತ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದರು.

ಅನೆದಾಳಿ:ಬ್ಯಾರಿಕೇಡ್ ನಿರ್ಮಾಣಕ್ಕೆ ಕ್ರಮ

ಚಿಕ್ಕಮಗಳೂರಿನಲ್ಲಿ ಅನೆ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಉತ್ತರಿಸುತ್ತಾ, ಅನೆ, ಚಿರತೆ ಮತ್ತು ಹುಲಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ, ಮಾನವ ವನ್ಯಪ್ರಾಣಿ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ವನ್ಯಜೀವಿಗಳು ಜನಪ್ರದೇಶಗಳಿಗೆ ಬರದಂತೆ ಕಾಡಂಚಿನ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ಯಾರಿಕೇಡ್ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ ಎಂದರು.

ಮಾದಕವಸ್ತುಗಳ ನಿಗ್ರಹ:

ಶಿವಮೊಗ್ಗ ವಿದ್ಯಾರ್ಥಿ ಹತ್ಯೆ ಹಾಗೂ ಅಪ್ರಾಪ್ತರಲ್ಲಿ ಗಾಂಜಾ ಸೇವೆನೆ ವ್ಯಾಪಕವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ನಿಗ್ರಹಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದರು.

ಅಜೀಂಪ್ರೇಂಜಿ ವಿವಿಯ ಮೇಲೆ ಎಬಿವಿಪಿ ವಿದ್ಯಾರ್ಥಿಗಳು ದಾಂಧಲೆ ನಡೆಸಿರುವ ಬಗ್ಗೆ ಉತ್ತರಿಸಿ, ಯಾವುದೇ ಸಂಘಟನೆಗಳು ಕಾನೂನು ವಿರುದ್ಧವಾಗಿ ನಡೆದುಕೊಂಡಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಗ್ಯಾರಂಟಿ ಯೋಜನೆ

ಗ್ಯಾರಂಟಿಗಳ ಬಗ್ಗೆ ಡಿಸಿಎಂ ಡಿಕೆಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿ,ಗ್ಯಾರಂಟಿ ಯೋಜನೆಗಳಿಗೆ ವಾರ್ಷಕ 52000 ಕೋಟಿ ರೂ.ಗಳನ್ನು ವೆಚ್ಚ ಮಾಡಿದರೂ, ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲಾಗುತ್ತಿದೆ. ಈಗಾಗಲೇ 1,20,000 ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ನೀಡಲಾಗಿದೆ ಎಂದರು.

ಆಗುಂಬೆ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮತಿ ನೀಡಲಾಗುವುದೇ ಎಂಬುದಕ್ಕೆ ಉತ್ತರಿಸುತ್ತಾ, ಇದಕ್ಕೆ ಸಂಬಂಧಿಸಿದಂತೆ ಪರಿಸರವಾದಿಗಳೊಂದಿಗೆ ಚರ್ಚಿಸಲಾಗುವುದು ಹಾಗೂ ಅನುಮತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಕಾರ್ಕಾಳದಲ್ಲಿ ಪರುಶರಾಮ ಧೀಂ ಪಾರ್ಕ್ ನಿರ್ಮಾಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಧೀಂ ಪಾರ್ಕ್ ನಿರ್ಮಾಣ ಯೋಜನೆಯನ್ನು ಸಧ್ಯದಲ್ಲಿಯೇ ಪೂರ್ಣಗೊಳಿಸಲಾಗುವುದು. ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅವ್ಯವಹಾರ ಪ್ರಕರಣದಬಗ್ಗೆ ಮಾತನಾಡಿ, ಕಾರ್ಖಾನೆಯ ಗುಜರಿ ಮಾರಾಟ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.