2026-05-07 05:16:19

infiltraters not sentout from west bengal; bangladesh confience| ಪಶ್ಚಿಮ ಬಂಗಾಳದಿಂದ ಅಕ್ರಮ ವಲಸಿಗರನ್ನು ಹೊರದಬ್ಬಲ್ಲ ಎಂದು ಭಾವಿಸಿದ್ದೇವೆ: ಬಾಂಗ್ಲಾ ಗೃಹಸಚಿವ ವಿಶ್ವಾಸ| Speed News Kannada

infiltraters not sentout from west bengal; bangladesh confience| ಪಶ್ಚಿಮ ಬಂಗಾಳದಿಂದ ಅಕ್ರಮ ವಲಸಿಗರನ್ನು ಹೊರದಬ್ಬಲ್ಲ ಎಂದು ಭಾವಿಸಿದ್ದೇವೆ: ಬಾಂಗ್ಲಾ ಗೃಹಸಚಿವ ವಿಶ್ವಾಸ| Speed News Kannada

ಢಾಕಾ: ಗಡಿ ರಾಜ್ಯವಾದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಅಲ್ಲಿಂದ ಅಕ್ರಮ ವಲಸಿಗರನ್ನು ಬಾಂಗ್ಲಾದೇಶಕ್ಕೆ ದಬ್ಬುವುದಿಲ್ಲ ಎಂದು ಬಾಂಗ್ಲಾದೇಶದ ಗೃಹ ಸಚಿವ ಸಲಾಹುದ್ದೀನ್‌ ಅಹ್ಮದ್‌ ಇಂದು ಭರವಸೆ  ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ವಲಸಿಗರನ್ನು ಪಶ್ಚಿಮಬಂಗಾಳದಿಂದ ಬಲವಂತವಾಗಿ ಹೊರದಬ್ಬುವುದಿಲ್ಲ ಎಂದು ನಾನು ಭಾವಿಸಿದ್ದೇನೆ. ಆದರೂ ಗಡಿಯಲ್ಲಿ ಕಟ್ಟೆಚ್ಚರದಿಂದ ಇರುವಂತೆ ಗಡಿ ಭದ್ರತಾ ಪಡೆಗೆ ಸೂಚಿಸಿದ್ದೇನೆ ಎಂದು ತಿಳಿಸಿದರು. ಬಂಗಾಳದಲ್ಲಿ ಸರ್ಕಾರ ಬದಲಾಗಿದ್ದು, ಅಕ್ರಮ ವಲಸಿಗರು ಎಂದು ಅಲ್ಲಿನ ನಿವಾಸಿಗಳನ್ನು ಬಾಂಗ್ಲಾದೇಶಕ್ಕೆ ದಬ್ಬಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ವಿದೇಶಾಂಗ ಸಚಿವ ಖಲೀಲ್‌ ಉರ್‌ ರೆಹಮಾನ್‌ ಅವರು ಹೇಳಿಕೆ ನೀಡಿದ ಮರುದಿನವೇ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ.

 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.