ಬೆಂಗಳೂರು: ಬೆಂಗಳೂರಿನಲ್ಲಿ ಸಮಸ್ಯೆಗಳಿಗೇನೂ ಕೊರೆತೆ ಇಲ್ಲ. ಯಾವುದೇ ದಿಕ್ಕಿನಲ್ಲಿ ಪ್ರಯಾಣಿಸಿದರೂ ಟ್ರಾಫಿಕ್ ಸೇರಿದಂತೆ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಈ ನಿಟ್ಟಿನಲ್ಲಿ ಇಂದು ಬೆಳಿಗ್ಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಹೊರ ವರ್ತುಲ ರಸ್ತೆ (ORR) – ಸಿಲ್ಕ್ ಬೋರ್ಡ್ ಜಂಕ್ಷನ್ ರಿಂದ ಕೆ.ಆರ್.ಪುರಂವರೆಗೆ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಹಲವಾರು ಅಧಿಕಾರಿಗಳು ಹಾಜರಿದ್ದರು.
ಪರಿಶೀಲನೆ ನಡೆಸಿದ ಆಯುಕ್ತರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ಹಲವು ಸೂಚನೆಗಳನ್ನು ನೀಡಿದರು.
* ಇಬ್ಲೂರು ಜಂಕ್ಷನ್ನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಸುಮಾರು 800 ಮೀ. ಉದ್ದದ ಮೇಲ್ಸೇತುವೆ ನಿರ್ಮಾಣಕ್ಕೆ ಯೋಜನೆ ರೂಪಿಸಲು ಸೂಚನೆ
* ಅಂದಾಜು ವೆಚ್ಚ, ಕಾಮಗಾರಿ ಅವಧಿ ಹಾಗೂ ನಿರ್ಮಾಣ ಮಾದರಿ ಕುರಿತು ಸಮಗ್ರ ವರದಿ ತಯಾರಿಸಲು ನಿರ್ದೇಶನ
* ಸಿಲ್ಕ್ ಬೋರ್ಡ್ ಜಂಕ್ಷನ್ ಸಮಗ್ರ ಅಭಿವೃದ್ಧಿಗೆ ದಕ್ಷಿಣ ಪಾಲಿಕೆ ಮತ್ತು ಮೆಟ್ರೋ ಇಲಾಖೆಯೊಂದಿಗೆ ಸಮನ್ವಯ
* ಮೆಟ್ರೋ ನಿಲ್ದಾಣಗಳ ಬಳಿ ರಸ್ತೆ ಸಮತಟ್ಟಾಗಿಸಲು ಸೂಚನೆ
ಪೈಲ್ ಕ್ಯಾಪ್ ಕಾಮಗಾರಿಯಿಂದ ಉಂಟಾದ ರಸ್ತೆ ಸ್ರಿಂಕ್ ಸಮಸ್ಯೆ ತಕ್ಷಣ ಸರಿಪಡಿಸಲು ಸೂಚನೆ.
* ಪಾದಚಾರಿ ಮಾರ್ಗ ಅಭಿವೃದ್ಧಿಗೆ ಆದ್ಯತೆ
* ಇಬ್ಲೂರು ಮೆಟ್ರೋ ನಿಲ್ದಾಣದ ಬಳಿ 2 ಕಿ.ಮೀ ಪಾದಚಾರಿ ಮಾರ್ಗ ಪೂರ್ಣಗೊಳಿಸಲು ಸೂಚನೆ
* ಅಗತ್ಯವಿರುವ ಸ್ಥಳಗಳಲ್ಲಿ ಸ್ಕೈವಾಕ್ ಪಟ್ಟಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ
* ಕೋಡಿಬಿಸನಹಳ್ಳಿ ಬಳಿ ರಾಜಕಾಲುವೆ ಅಗಲೀಕರಣ ಮಾಡಿ ಪಾದಚಾರಿ ಮಾರ್ಗ ನಿರ್ಮಾಣ
* ಇತರೆ ಪ್ರಮುಖ ನಿರ್ದೇಶನಗಳು:
* ಫೆಬ್ರವರಿ ಅಂತ್ಯದೊಳಗೆ ಡಬಲ್ ಡೆಕ್ಕರ್ ರಸ್ತೆ ಕಾಮಗಾರಿ ಪೂರ್ಣಗೊಳಿಸಿ
* ಹೆಚ್.ಎಸ್.ಆರ್. ಜಂಕ್ಷನ್ ಸರ್ವೀಸ್ ರಸ್ತೆ ಡಾಂಬರೀಕರಣ
* ಕಾರ್ತಿಕ್ ನಗರ ಮೆಟ್ರೋ ಬಳಿ ಪಾದಚಾರಿ ಮಾರ್ಗ ಸ್ವಚ್ಛತೆ
* ಸೇಲಂ ಬ್ರಿಡ್ಜ್ ಬಳಿ ಪೇ ಪಾರ್ಕಿಂಗ್ ವ್ಯವಸ್ಥೆ ಜಾರಿ