ಇತ್ತಿಚಿನ ದಿನಗಳಲ್ಲಿ ರಣವೀರ್ ಸಿಂಗ್ ಕಾಂತಾರ-1' ಸಿನಿಮಾದಲ್ಲಿನ ಚಾಮುಂಡಿ ಪಾತ್ರಕ್ಕೆ ಅವಮಾನ ಮಾಡಿದ್ವರು. ಇನ್ನೂ ಈ ಆರೋಪಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಣವೀರ್ ಸಿಂಗ್ ಕ್ಷಮೆಯಾಚಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಬೆಂಗಳೂರಿನಲ್ಲಿ ಮಾಹಿತಿ ನೀಡಿದ ವಕೀಲ ಪ್ರಶಾಂತ್ ಮಿತ್ತಲ್, ಕರ್ನಾಟಕ ಹೈಕೋರ್ಟ್ನಲ್ಲಿ ಈ ಪ್ರಕರಣ ಇತ್ಯರ್ಥವಾಗಿದೆ ಎಂದು ತಿಳಿಸಿದ್ದಾರೆ. ವಿವಾದಕ್ಕೆ ಕಾರಣವಾಗಿದ್ದ ಅಂಶಗಳ ಬಗ್ಗೆ ನಟ ರಣವೀರ್ ಸಿಂಗ್ ಅವರು ಕ್ಷಮೆ ಕೋರಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಅಷ್ಟೇ ಅಲ್ಲದೆ, ಈ ವಿವಾದದ ತರುವಾಯ ನಟ ರಣವೀರ್ ಸಿಂಗ್ ಅವರು ಶೀಘ್ರದಲ್ಲೇ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿಯನ್ನೂ ವಕೀಲರು ಹಂಚಿಕೊಂಡಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಸಾರ್ವಜನಿಕ ವಲಯದಲ್ಲಿ ಚರ್ಚೆಯಲ್ಲಿದ್ದ ಈ ಪ್ರಕರಣಕ್ಕೆ ಈಗ ತೆರೆಬಿದ್ದಂತಾಗಿದೆ