2026-04-24 12:15:44

Kuldeep Yadavs reception | ಕುಲದೀಪ್ ಯಾದವ್ ಆರತಕ್ಷತೆ ಯೋಗಿ ಅಖಿಲೇಶ್ ಗಂಭೀರ್ ಸೇರಿ ಗಣ್ಯರು ಭಾಗಿ | Speed News Kannada

Kuldeep Yadavs reception | ಕುಲದೀಪ್ ಯಾದವ್ ಆರತಕ್ಷತೆ ಯೋಗಿ ಅಖಿಲೇಶ್ ಗಂಭೀರ್ ಸೇರಿ ಗಣ್ಯರು ಭಾಗಿ | Speed News Kannada

ಲಕ್ಷ್ಮಿ: ಭಾರತದ ಕ್ರಿಕೆಟ್ ತಂಡದ ಸ್ಪಿನ್ನರ್ ಕುಲದೀಪ್ ಯಾದವ್ ಅವರ ಅದ್ಧೂರಿ ವಿವಾಹ ಆರತಕ್ಷತೆ ಸಮಾರಂಭದಲ್ಲಿ ರಾಜಕೀಯ ಮತ್ತು ಕ್ರಿಕೆಟ್ ಜಗತ್ತಿನ ಹಲವಾರು ಪ್ರಮುಖ ವ್ಯಕ್ತಿಗಳು ಭಾಗಿಯಾದರು.
ಮಂಗಳವಾರ(ಮಾ17) ಸಂಜೆ ಲಕ್ಷ್ಮೀ ದ 'ದಿ ಸೆಂಟ್ರಮ್' ನಲ್ಲಿ ನಡೆದ ಅದ್ಧೂರಿ ಆರತಕ್ಷತೆ ಸಮಾರಂಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಭಾರತ ತಂಡದ ಕೋಚ್ ಗೌತಮ್ ಗಂಭೀರ್, ಕುಲದೀಪ್ ಅವರ ಸಹ ಆಟಗಾರರಾದ ರವೀಂದ್ರ ಜಡೇಜಾ, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್ ಮತ್ತು ಭಾರತದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ಸೇರಿದಂತೆ ಇತರ ಗಣ್ಯರು ಭಾಗವಹಿಸಿದ್ದರು.
31 ರ ಹರೆಯದ ಸ್ಪಿನ್ನರ್ ಮಾರ್ಚ್ 14 ರಂದು ಉತ್ತರಾಖಂಡದ ಮಸೂರಿಯಲ್ಲಿ ನಡೆದ ಸಮಾರಂಭದಲ್ಲಿ ಬಾಲ್ಯದ ಗೆಳತಿ ವಂಶಿಕಾ ಚಡ್ತಾ ಅವರೊಂದಿಗೆ ಹೊಸಬಾಳಿಗೆ ಕಾಲಿರಿಸಿದ್ದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.