ಲಕ್ಷ್ಮಿ: ಭಾರತದ ಕ್ರಿಕೆಟ್ ತಂಡದ ಸ್ಪಿನ್ನರ್ ಕುಲದೀಪ್ ಯಾದವ್ ಅವರ ಅದ್ಧೂರಿ ವಿವಾಹ ಆರತಕ್ಷತೆ ಸಮಾರಂಭದಲ್ಲಿ ರಾಜಕೀಯ ಮತ್ತು ಕ್ರಿಕೆಟ್ ಜಗತ್ತಿನ ಹಲವಾರು ಪ್ರಮುಖ ವ್ಯಕ್ತಿಗಳು ಭಾಗಿಯಾದರು.
ಮಂಗಳವಾರ(ಮಾ17) ಸಂಜೆ ಲಕ್ಷ್ಮೀ ದ 'ದಿ ಸೆಂಟ್ರಮ್' ನಲ್ಲಿ ನಡೆದ ಅದ್ಧೂರಿ ಆರತಕ್ಷತೆ ಸಮಾರಂಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಭಾರತ ತಂಡದ ಕೋಚ್ ಗೌತಮ್ ಗಂಭೀರ್, ಕುಲದೀಪ್ ಅವರ ಸಹ ಆಟಗಾರರಾದ ರವೀಂದ್ರ ಜಡೇಜಾ, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್ ಮತ್ತು ಭಾರತದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ಸೇರಿದಂತೆ ಇತರ ಗಣ್ಯರು ಭಾಗವಹಿಸಿದ್ದರು.
31 ರ ಹರೆಯದ ಸ್ಪಿನ್ನರ್ ಮಾರ್ಚ್ 14 ರಂದು ಉತ್ತರಾಖಂಡದ ಮಸೂರಿಯಲ್ಲಿ ನಡೆದ ಸಮಾರಂಭದಲ್ಲಿ ಬಾಲ್ಯದ ಗೆಳತಿ ವಂಶಿಕಾ ಚಡ್ತಾ ಅವರೊಂದಿಗೆ ಹೊಸಬಾಳಿಗೆ ಕಾಲಿರಿಸಿದ್ದರು.