2026-03-07 12:56:21

Let the war stop before further disaster occurs | ಮತ್ತಷ್ಟು ಅನಾಹುತ ಆಗುವ ಮೊದಲು ಯುದ್ಧ ನಿಲ್ಲಲಿ ಸಂಸದ ಬೊಮ್ಮಾಯಿ ಆಶಯ | Speed News Kannada

Let the war stop before further disaster occurs | ಮತ್ತಷ್ಟು ಅನಾಹುತ ಆಗುವ ಮೊದಲು ಯುದ್ಧ ನಿಲ್ಲಲಿ ಸಂಸದ ಬೊಮ್ಮಾಯಿ ಆಶಯ | Speed News Kannada

ಬೆಂಗಳೂರು: ಇಸ್ರೇಲ್ ಇರಾನ್ ಮೇಲೆ ಯುದ್ಧ ಮಾಡುತ್ತಿದ್ದು, ಇರಾನ್ ಪ್ರತ್ಯುತ್ತರ ನೀಡುತ್ತಿರುವುದು ದೊಡ್ಡ ಆತಂಕವಾಗಿದೆ. ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗ ನಡೆಯುತ್ತಿರುವ ಯುದ್ದದಲ್ಲಿ ಇಸ್ರೇಲ್ ಮಾತ್ರವಲ್ಲ, ಅಮೇರಿಕಾ‌ ಕೂಡ ಅದರ ಹಿಂದಿದೆ. ಮಧ್ಯಪ್ರಾಚ್ಯ ಇಡೀ ವಿಶ್ವದ ಆರ್ಥಿಕ ಮತ್ತು ಸಾಂಸ್ಕೃತಿಕ ಪ್ರದೇಶ. ಅಲ್ಲಿ ಹಲವು ಯುದ್ಧಗಳನ್ನು ಕಂಡಿದ್ದೇವೆ. ಮೊದಲು ಜರಸಲೇಮ್ (ಧರ್ಮಕ್ಕಾಗಿ) ಗಾಗಿ ಯುದ್ಧ ನಡೆಯುತಿತ್ತು. ಈಗ ಪೆಟ್ರೋಲಿಯಂ, ಧಾರ್ಮಿಕ ವಿಚಾರಕ್ಕೆ ಯುದ್ಧ ಅಗುತ್ತಿದೆ. ಅಮೇರಿಕಾ ಆಯಿಲ್ ಮೇಲೆ ಹಿಡಿತ ಸಾಧಿಸಲು ಹೋರಾಟ ಮಾಡುತ್ತಿದೆ. ಅಮೇರಿಕಾ ಯಾರ ಮಾತನ್ನೂ ಕೇಳುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಹೆಳಿದರು. 
ಮೂರನೇ ವಿಶ್ವ ಯುದ್ಧ ಆಗುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೂರನೇ ವಿಶ್ವ ಯುದ್ದ ಆಗಲು ಚೀನಾ ಮತ್ತು ರಷ್ಯಾ ಇನ್ನೂ ಯುದ್ದಕ್ಕೆ ಇಳಿದಿಲ್ಲ. ಕಾದು ನೋಡುವ ತಂತ್ರ ಮಾಡುತ್ತಿವೆ. ಅವರೂ ಯುದ್ದ ರಂಗಕ್ಕೆ ಇಳಿದರೆ ಬಹಳ‌ ದೊಡ್ಡ ಮಟ್ಟಕ್ಕೆ ಹೋಗಲಿದೆ. ದೊಡ್ಡ ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು ಎಂದು ಹೇಳಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.