2026-03-07 05:56:30

Lucky Oberoi | ಪಂಜಾಬ್ ಗುರುದ್ವಾರದ ಹೊರಗೆ ಎಎಪಿ ಪಕ್ಷದ ಮುಖಂಡ ಲಕ್ಕಿ ಒಬೆರಾಯ್ ಗುಂಡಿಕ್ಕಿ ಹತ್ಯೆ | Speed News Kannada

Lucky Oberoi | ಪಂಜಾಬ್ ಗುರುದ್ವಾರದ ಹೊರಗೆ ಎಎಪಿ ಪಕ್ಷದ ಮುಖಂಡ ಲಕ್ಕಿ ಒಬೆರಾಯ್ ಗುಂಡಿಕ್ಕಿ ಹತ್ಯೆ | Speed News Kannada

ಜಲಂಧರ್‌: ಪಂಜಾಬ್‌ನ ಜಲಂಧರ್‌ನಲ್ಲಿ ಇಂದು ಶುಕ್ರವಾರ ಹಾಡಹಗಲೇ ಇಲ್ಲಿನ ಗುರುದ್ವಾರದ ಹೊರಗೆ ಆಮ್ ಆದ್ಮಿ ಪಕ್ಷದ ಮುಖಂಡ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. 
ದ್ವಿಚಕ್ರ ವಾಹನದಲ್ಲಿ ಆಗಮಿಸಿದ ಅಪರಿಚಿತ ದುಷ್ಕರ್ಮಿಗಳು ಮಾಡೆಲ್ ಟೌನ್ ಪ್ರದೇಶದ ಸಮೀಪವಿರುವ ಗುರುದ್ವಾರದ ಬಳಿ ಲಕ್ಕಿ ಒಬೆರಾಯ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅವರು  ಗುರುದ್ವಾರದ ಹೊರಗೆ ತಮ್ಮ ಜೀಪಿನೊಳಗೆ ಇದ್ದರು ಎನ್ನಲಾಗಿದೆ.
ರಕ್ತದ ಮಡುವಿನಲ್ಲಿ ಬಿದ್ದದ್ದ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯೆಯೇ ಅಸುನೀಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಜಲಂಧರ್ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಘಟನೆಗೆ ಯಾರು ಕಾರಣ ಎಂದು ತಿಳಿದು ಬಂದಿಲ್ಲ. ಯಾವುದೇ ಸಂಘಟನೆಯೂ ಜವಬ್ದಾರಿ ಹೊತ್ತಿಲ್ಲ. ಇತ್ತೀಚೆಗೆ ನಡೆದ ಜಲಂದರ್‌ ಪಾಲಿಕೆ ಚುನಾವಣೆಯಲ್ಲಿ ಲಕ್ಕಿ ಒಬೆರಾಯ್ ಅವರ ಪತ್ನಿ ಸ್ಪರ್ಧಿಸಿ ಪರಾಭವ ಹೊಂದಿದ್ದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.