2026-04-24 12:15:57

Man stabbed to death | ಚಾಕುವಿನಿಂದ ಇರಿದು ವ್ಯಕ್ತಿ ಕೊಲೆ | Speed News Kannada

Man stabbed to death | ಚಾಕುವಿನಿಂದ ಇರಿದು ವ್ಯಕ್ತಿ ಕೊಲೆ | Speed News Kannada

ತುಮಕೂರು: ನಗರದ ಮೆಳೇಕೋಟೆ ಬಳಿ ಮಂಗಳವಾರ ಮೊಹ್ಮದ್ ಮುಬಾರಕ್ ಪಾಷ (29) ಎಂಬುವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಕೊಲೆಯಾದ ಪಾಷ ನಗರದ ನಜರಾಬಾದ್ ನಿವಾಸಿ. ಕೊಲೆ ಆರೋಪಿ ಮೆಳೆಕೋಟೆಯ ಇಬ್ರಾಹಿಂ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. 'ಕೊಲೆಯಲ್ಲಿ ಮತ್ತೊಬ್ಬ ಆರೋಪಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಇದ್ದು, ತನಿಖೆ ನಡೆಸಲಾಗುತ್ತಿದೆ' ಎಂದು ಪೊಲೀಸ್ ಮೂಲಗಳು ತಿಳಿಸಿವೆ.
'ಇಬ್ರಾಹಿಂ ವಿರುದ್ಧ ಮುಬಾರಕ್ ಪಾಷ ವಾಮಾಚಾರ ಮಾಡಿಸಿದ್ದರು. ಇದೇ ಕಾರಣದಿಂದ ಕೋಪಗೊಂಡ ಇಬ್ರಾಹಿಂ ತನ್ನ ಸ್ನೇಹಿತನ ಜತೆ ಸೇರಿ ಮುಬಾರಕ್ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡಿದ್ದಾರೆ. ಹಣಕಾಸಿನ ವಿಚಾರಕ್ಕೂ ಹತ್ಯೆ ನಡೆದಿರುವ ಸಂಶಯ ವ್ಯಕ್ತವಾಗಿದೆ' ಎಂದೂ ಮೂಲಗಳು ಹೇಳಿವೆ.
ತಿಲಕ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.