2026-04-24 02:51:40

Mandatory fine warning for garbage segregation in Bengaluru|ಬೆಂಗಳೂರುದಲ್ಲಿ ಕಸ ವಿಂಗಡಣೆ ಕಡ್ಡಾಯ ದಂಡದ ಎಚ್ಚರಿಕೆ|Speed News Kannada

Mandatory fine warning for garbage segregation in Bengaluru|ಬೆಂಗಳೂರುದಲ್ಲಿ ಕಸ ವಿಂಗಡಣೆ ಕಡ್ಡಾಯ ದಂಡದ ಎಚ್ಚರಿಕೆ|Speed News Kannada

ರಾಜಧಾನಿ ಬೆಂಗಳೂರಿನ ಜನತೆಗೆ ಮಹತ್ವದ ಮಾಹಿತಿ. ನಗರದಲ್ಲಿ ಇನ್ನು ಮುಂದೆ ಕಸ ವಿಂಗಡಣೆ ಕಡ್ಡಾಯವಾಗಲಿದೆ. ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸದಿದ್ದರೆ ನಾಗರೀಕರಿಗೆ ದಂಡ ವಿಧಿಸಲು ಅಧಿಕಾರಿಗಳು ಮುಂದಾಗಿದ್ದಾರೆ.ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಗಳು–2026 ಅನ್ವಯ, ಏಪ್ರಿಲ್ 1ರಿಂದ ಈ ನಿಯಮ ಜಾರಿಗೆ ಬರುತ್ತಿದೆ. ಮನೆಮಾಲೀಕರು ಕಸವನ್ನು ಹಸಿ, ಒಣ, ಸ್ಯಾನಿಟರಿ ಹಾಗೂ ವಿಶೇಷ ತ್ಯಾಜ್ಯವಾಗಿ ವಿಂಗಡಿಸಲೇಬೇಕು.

ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಬೆಂಗಳೂರು ಸ್ಟೀಲ್ ವೇಸ್ಟ್ ಮ್ಯಾನೇಜ್‌ಮೆಂಟ್ ಲಿಮಿಟೆಡ್ ವಿಶೇಷ ಕಾರ್ಯಾಚರಣೆ ಆರಂಭಿಸಿದೆ. ಬುಧವಾರದಿಂದ ನಗರಾದ್ಯಂತ ಪರಿಶೀಲನೆ ನಡೆಯಲಿದೆ.ಮೊದಲ ಬಾರಿ ನಿಯಮ ಉಲ್ಲಂಘಿಸಿದರೆ ₹500 ದಂಡ, ಎರಡನೇ ಬಾರಿ ₹1000 ದಂಡ ವಿಧಿಸಲಾಗುತ್ತದೆ. ಪದೇಪದೇ ಉಲ್ಲಂಘನೆ ಮಾಡಿದರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.ಹೀಗಾಗಿ, ಬೆಂಗಳೂರಿನ ನಾಗರಿಕರು ಕಸ ವಿಂಗಡಣೆ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಾವಶ್ಯಕವಾಗಿದೆ.

 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.