2026-04-30 06:01:32

May 4th is the day when political destiny will be decided|ಮೇ 4ಕ್ಕೆ ರಾಜಕೀಯ ಭವಿಷ್ಯ ತೀರ್ಮಾನಿಸುವ ದಿನ|Speed News Kannada

May 4th is the day when political destiny will be decided|ಮೇ 4ಕ್ಕೆ ರಾಜಕೀಯ ಭವಿಷ್ಯ ತೀರ್ಮಾನಿಸುವ ದಿನ|Speed News Kannada

ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು ಮತ್ತು ಪುದುಚೇರಿ ವಿಧಾನಸಭಾ ಚುನಾವಣಾ ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿ ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಸಿಗಲಿದೆ.ಪಶ್ಚಿಮ ಬಂಗಾಳದಲ್ಲಿ ಮಮತ ಬ್ಯಾನರ್ಜಿ ಅವರಿಗೆ ಅಗ್ನಿಪರೀಕ್ಷೆಯಾಗಿದ್ದು, ತಮಿಳುನಾಡು ಮತ್ತು ಕೇರಳದಲ್ಲೂ ಕಠಿಣ ಪೈಪೋಟಿ ಕಾಣಿಸಿಕೊಂಡಿದೆ. ಅಸ್ಸಾಂನಲ್ಲಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಬಿಜೆಪಿ ತನ್ನ ಬಲವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ.ಪುದುಚೇರಿಯಲ್ಲಿ ಎನ್‌ಡಿಎಗೆ ಮುನ್ನಡೆ ಸಿಗುವ ಸಾಧ್ಯತೆ ಇದೆ ಎಂದು ಎಕ್ಸಿಟ್ ಪೋಲ್ ಸೂಚಿಸಿದೆ.ಮತ ಎಣಿಕೆ ಪ್ರಕ್ರಿಯೆ ಅಂಚೆ ಮತಪತ್ರಗಳಿಂದ ಆರಂಭವಾಗಿ ನಂತರ ಇವಿಎಂ ಮತಗಳ ಎಣಿಕೆ ನಡೆಯಲಿದೆ.

 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.