2026-07-23 06:15:15

Minister Kumaraswamy | Nirmala Sitharaman | ಉಕ್ಕು ವಲಯದ ಬೆಳವಣಿಗೆ ಹೂಡಿಕೆ ಸಚಿವೆ ನಿರ್ಮಲಾ ಸೀತಾರಾಮನ್ ಜತೆ ಸಚಿವ ಕುಮಾರಸ್ವಾಮಿ ಚರ್ಚೆ | Speed News Kannada

Minister Kumaraswamy | Nirmala Sitharaman | ಉಕ್ಕು ವಲಯದ ಬೆಳವಣಿಗೆ ಹೂಡಿಕೆ ಸಚಿವೆ ನಿರ್ಮಲಾ ಸೀತಾರಾಮನ್ ಜತೆ ಸಚಿವ ಕುಮಾರಸ್ವಾಮಿ ಚರ್ಚೆ | Speed News Kannada

ನವದೆಹಲಿ: ಉಕ್ಕು ಸಚಿವಾಲಯದ ವಿವಿಧ ಅಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಉಕ್ಕು ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಸಂಸತ್ತಿನಲ್ಲಿ ಕೇಂದ್ರದ ಹಣಕಾಸು ಸಚಿವರ ಕಚೇರಿಯಲ್ಲಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ ಅವರು, ಪ್ರಮುಖ ಅಭಿವೃದ್ಧಿ ಆದ್ಯತೆಗಳ ಕುರಿತು ವಿವರವಾದ ಚರ್ಚೆಗಳನ್ನು ನಡೆಸಿದರು.
ಉಕ್ಕು ಸಚಿವಾಲಯದ ಹೊಸ ಹೂಡಿಕೆಗಳು ಮತ್ತು ಈಗಾಗಲೇ ನಡೆಯುತ್ತಿರುವ ಯೋಜನೆಗಳನ್ನು ಬಗ್ಗೆ ಹಾಗೂ ಉಕ್ಕು ವಲಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಾನ್ಯ ಸಚಿವರ ಜತೆ ಸಮಾಲೋಚನೆ ನಡೆಸಲಾಯಿತು ಎಂದು ಸಚಿವ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಸುಸ್ಥಿರ ಬೆಳವಣಿಗೆಯನ್ನು ಉತ್ತೇಜಿಸುವ ಮತ್ತು ವಿಕಸಿತ ಭಾರತ-2047 ದೃಷ್ಟಿಕೋನವನ್ನು ಮುನ್ನಡೆಸುವ ಭವಿಷ್ಯತ್ತಿನ ಕೇಂದ್ರದ ಆಯವ್ಯಯವನ್ನು ಮಂಡಿಸಿದ್ದಕ್ಕಾಗಿ ಹಣಕಾಸು ಸಚಿವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ ಎಂದು ಸಚಿವರು ಹೇಳಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.