2026-03-07 12:55:37

My soldiers are ready for war Warning to Team India | ಯುದ್ಧಕ್ಕೆ ನನ್ನ ಸೈನಿಕರು ಸಿದ್ಧರಾಗಿದ್ದಾರೆ. ಟೀಮ್ ಇಂಡಿಯಾಗೆ ಎಚ್ಚರಿಕೆ | Speed News Kannada

My soldiers are ready for war Warning to Team India | ಯುದ್ಧಕ್ಕೆ ನನ್ನ ಸೈನಿಕರು ಸಿದ್ಧರಾಗಿದ್ದಾರೆ. ಟೀಮ್ ಇಂಡಿಯಾಗೆ ಎಚ್ಚರಿಕೆ | Speed News Kannada

"ಯುದ್ದಕ್ಕೆ ನನ್ನ ಎಲ್ಲಾ ಸೈನಿಕರು ಸಿದ್ಧರಾಗಿದ್ದಾರೆ'... ಹೀಗಂದಿರುವುದು ಮತ್ಯಾರೂ ಅಲ್ಲ ವೆಸ್ಟ್ ಇಂಡೀಸ್ ಕೋಚ್ ಡ್ಯಾರೆನ್ ಸ್ಯಾಮಿ ಹೀಗೆ ವಿಂಡೀಸ್ ಪಡೆ ಸಿದ್ಧರಾಗಿರುವುದು ಭಾರತ ತಂಡವನ್ನು ಎದುರಿಸಲು ಎಂಬುದು ವಿಶೇಷ. ಮಾರ್ಚ್ 1 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಸೆಮಿಫೈನಲ್‌ಗೇರಲಿದೆ. ಈ ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ವೆಸ್ಟ್ ಇಂಡೀಸ್ ಕೋಚ್ ಡ್ಯಾರೆನ್ ಸ್ಯಾಮಿ ಟೀಮ್ ಇಂಡಿಯಾವನ್ನು ಎದುರಿಸಲು ನನ್ನ ಪಡೆ ಸಿದ್ಧರಾಗಿದ್ದಾರೆ. ತಂಡವು ಯಾವುದೇ ಸವಾಲನ್ನು ಎದುರಿಸಲು ಸಜ್ಜಾಗಿದ್ದಾರೆ. ಮಾರ್ಚ್ 1 ರಂದು ನಡೆಯಲಿರುವ ಯುದ್ಧಕ್ಕೆ ನನ್ನ ಎಲ್ಲಾ ಸೈನಿಕರು ಸಿದ್ಧರಿದ್ದಾರೆ. ಅಲ್ಲದೆ ಈ ಪಂದ್ಯದಲ್ಲಿ ನಾವೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇನ್ನು ಭಾರತ ತಂಡವನ್ನು “ಗೋಲಿಯಾತ್' (ಬಲಿಷ್ಠ ತಂಡ) ಗೆ ಹಾಗೂ ತಮ್ಮ ತಂಡವನ್ನು “ಡೇವಿಡ್" ಗೆ ಹೋಲಿಸಿದ ಸ್ವಾಮಿ, 2016ರಲ್ಲಿ ಡೇವಿಡ್ (ವೆಸ್ಟ್ ಇಂಡೀಸ್) ಹೇಗೆ ಗೋಲಿಯಾತ್ (ಭಾರತ) ಅನ್ನು ಸೋಲಿಸಿತ್ತೋ ಅದೇ ಇತಿಹಾಸ ಮರುಕಳಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಡೇವಿಡ್ ಮತ್ತು ಗೋಲಿಯಾತ್ ಬೈಬಲ್‌ನ (1 ಸ್ಯಾಮ್ಯುಯೆಲ್ 17) ಪ್ರಸಿದ್ದ ಕಥೆಯಾಗಿದ್ದು ಇದು ಸಣ್ಣ ದುರ್ಬಲ ವ್ಯಕ್ತಿ (ಡೇವಿಡ್) ತನ್ನ ಬುದ್ಧಿವಂತಿಕೆ ಮತ್ತು ನಂಬಿಕೆಯಿಂದ ಬಲಿಷ್ಠದೈತ್ಯ ಯೋಧನನ್ನು (ಗೋಲಿಯಾತ್) ಸೋಲಿಸುವ ಅಸಾಧ್ಯ ವಿಜಯವನ್ನು ಚಿತ್ರಿಸುತ್ತದೆ. ಈ ಕಥೆಯು ಸಾಂಕೇತಿಕವಾಗಿ ಪ್ರಸ್ತಾಪಿಸುವ ಮೂಲಕ ವೆಸ್ಟ್ ಇಂಡೀಸ್ ತಂಡವು ಬಲಿಷ್ಠ ಟೀಮ್ ಇಂಡಿಯಾವನ್ನು ಬಗ್ಗು ಬಡಿಯಲಿದೆ ಎಂದು ಡ್ಯಾರೆನ್ ಸ್ವಾಮಿ ಹೇಳಿದ್ದಾರೆ.
ಅಂದಹಾಗೆ ಇದೇ ಈಡನ್ ಗಾರ್ಡನ್ಸ್ ಮೈದಾನದಲ್ಲಿ 2016 ರಲ್ಲಿ ಡ್ಯಾರೆನ್ ಸ್ಯಾಮಿ ನಾಯಕತ್ವದಲ್ಲಿ ವೆಸ್ಟ್ ಇಂಡೀಸ್ ಟಿ20 ವಿಶ್ವಕಪ್ ಗೆದ್ದಿತ್ತು. ಆ ನೆನಪುಗಳು ತಂಡಕ್ಕೆ ಹೆಚ್ಚಿನ ಶಕ್ತಿ ನೀಡಲಿವೆ. ಹೀಗಾಗಿ ಈಡನ್ ಗಾರ್ಡನ್ಸ್ ಮೈದಾನದಲ್ಲಿ ವಿಂಡೀಸ್ ಪಡೆಯಿಂದ ಪ್ರಚಂಡ ಪ್ರದರ್ಶನವನ್ನು ನಿರೀಕ್ಷಿಸಬಹುದು ಎಂದಿದ್ದಾರೆ. ಇದೇ ವೇಳೆ ವೆಸ್ಟ್ ಇಂಡೀಸ್ ದಾಂಡಿಗ ಶಿಮ್ರಾನ್ ಹೆಮ್ಮೆಯರ್ ಅವರ ಉತ್ತಮ ಬ್ಯಾಟಿಂಗ್ ಫಾರ್ಮ್ ಮತ್ತು ತಂಡದ ಆಳವಾದ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಸ್ಯಾಮಿ, ಟೀಮ್ ಇಂಡಿಯಾ ಬೌಲರ್‌ಗಳ ವಿರುದ್ಧ ನಮ್ಮ ಬ್ಯಾಟರ್‌ಗಳು ಅಬ್ಬರಿಸುವುದನ್ನು ನಿರೀಕ್ಷಿಸಬಹುದು. ಈ ಮೂಲಕ ಭಾರತ ತಂಡಕ್ಕೆ ಸೋಲುಣಿಸಿ ನಾವು ಸೆಮಿಫೈನಲ್‌ಗೆ ಪ್ರವೇಶಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.