2026-04-28 05:51:16

Nikhil Kumaraswamy hits back at actor Chethan non violence|ನಟ ಚೇತನ್‌ ಅಹಿಂಸಾಗೆ ನಿಖಿಲ್ ಕುಮಾರಸ್ವಾಮಿ ತಿರುಗೇಟು|Speed News Kannada

Nikhil Kumaraswamy hits back at actor Chethan non violence|ನಟ ಚೇತನ್‌ ಅಹಿಂಸಾಗೆ ನಿಖಿಲ್ ಕುಮಾರಸ್ವಾಮಿ ತಿರುಗೇಟು|Speed News Kannada

ಕನ್ನಡದ ಕಲಾ ಸಾಮ್ರಾಟ, ವರನಟ ಡಾ. ರಾಜ್‌ಕುಮಾರ್ ಅವರ ಕುರಿತು ನಟ ಚೇತನ್ ಅಹಿಂಸಾ ಮಾಡಿರುವ ವಿವಾದಾತ್ಮಕ ಹೇಳಿಕೆಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಅಣ್ಣಾವ್ರು ಆರು ಕೋಟಿ ಕನ್ನಡಿಗರ ಭಾವನೆ. ಅವರ ಬಗ್ಗೆ ಹಗುರವಾಗಿ ಮಾತನಾಡುವುದು ಅಹಂಕಾರದ ಪರಮಾವಧಿ' ಎಂದು ನಿಖಿಲ್ ವಾಗ್ದಾಳಿ ನಡೆಸಿದ್ದಾರೆ.

ಚೇತನ್ ಅವರಿಗೆ ಇತಿಹಾಸದ ಅರಿವಿಲ್ಲ ಎಂದು ಟೀಕಿಸಿರುವ ಅವರು, 'ಗೋಕಾಕ್ ಚಳವಳಿಯ ಮೂಲಕ ಕನ್ನಡಕ್ಕೆ ಅಸ್ಮಿತೆ ತಂದುಕೊಟ್ಟ ಧೀಮಂತ ನಾಯಕರ ಬಗ್ಗೆ ಮಾತನಾಡುವ ಮುನ್ನ ಇತಿಹಾಸ ತಿಳಿದುಕೊಳ್ಳಿ' ಎಂದು ಸಲಹೆ ನೀಡಿದ್ದಾರೆ.ಸಾರ್ವಜನಿಕ ಜೀವನದಲ್ಲಿ ಟೀಕೆಗಳಿಗೆ ಘನತೆ ಇರಬೇಕು, ಪ್ರಚಾರದ ಹಪಾಹಪಿಯಿಂದ ದ್ವೇಷ ಬಿತ್ತುವ ಕೆಲಸ ಮಾಡಬೇಡಿ ಎಂದು ನಿಖಿಲ್ ಕುಮಾರಸ್ವಾಮಿ ಚೇತನ್ ಅಹಿಂಸಾಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.