2026-05-28 12:23:32

ರಾಜ್ಯದಲ್ಲಿ ಎಬೋಲಾ ಪ್ರಕರಣ ಇಲ್ಲ; ಆತಂಕಕ್ಕೀಡಾಗಬೇಡಿ: ಸಚಿವ ದಿನೇಶ್‌ ಗುಂಡೂರಾವ್| Speed News Kannada

ರಾಜ್ಯದಲ್ಲಿ ಎಬೋಲಾ ಪ್ರಕರಣ ಇಲ್ಲ; ಆತಂಕಕ್ಕೀಡಾಗಬೇಡಿ: ಸಚಿವ ದಿನೇಶ್‌ ಗುಂಡೂರಾವ್| Speed News Kannada

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಪ್ರಯೋಗಾಲಯ ತಪಾಸಣಾ ವರದಿ ಬಂದಿದ್ದು, ಸಂಪೂರ್ಣವಾಗಿ 'ನೆಗೆಟಿವ್' ಆಗಿರುತ್ತದೆ. ಆ ವ್ಯಕ್ತಿಗೆ ಯಾವುದೇ ಸೋಂಕು ತಗುಲಿಲ್ಲ. ಆದ್ದರಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗುವುದು ಬೇಡ ಎಂದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಶಂಕೆ ವ್ಯಕ್ತವಾದ ತಕ್ಷಣವೇ ಇಲಾಖೆಯು ಸಾರ್ವಜನಿಕ ಆರೋಗ್ಯ ಮಾರ್ಗಸೂಚಿಗಳ ಅನ್ವಯ ಅತ್ಯಂತ ಕಟ್ಟುನಿಟ್ಟಾದ ಮುನ್ನೆಚ್ಚರಿಕೆ ಕ್ರಮಗಳು ಮತ್ತು ವೈದ್ಯಕೀಯ ನಿಯಮಾವಳಿಗಳನ್ನು ಪಾಲಿಸಿದೆ.

ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯೇ ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ. ರಾಜ್ಯದ ಜನತೆಗೆ ನಾನು ಭರವಸೆ ನೀಡಲು ಬಯಸುತ್ತೇನೆ. —ನಮ್ಮ ಆರೋಗ್ಯ ಇಲಾಖೆಯು ಪ್ರತಿಯೊಂದು ಪರಿಸ್ಥಿತಿಯನ್ನೂ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಯಾವುದೇ ರೀತಿಯ ಸವಾಲನ್ನು ಎದುರಿಸಲು ಮತ್ತು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಸಂಪೂರ್ಣವಾಗಿ ಸಜ್ಜಾಗಿದೆ.

ಯಾರೂ ಅನಗತ್ಯವಾಗಿ ಆತಂಕಕ್ಕೊಳಗಾಗಬಾರದು ಎಂದು ಕಳಕಳಿಯಿಂದ ವಿನಂತಿಸುತ್ತೇನೆ. ವದಂತಿಗಳಿಗೆ ಕಿವಿಗೊಡದೆ, ನಿಗದಿಪಡಿಸಿದ ಆರೋಗ್ಯ ಮಾರ್ಗಸೂಚಿಗಳನ್ನು ಪಾಲಿಸಿ. ಸರ್ಕಾರ ಮತ್ತು ಆರೋಗ್ಯ ಇಲಾಖೆ ಅಧಿಕೃತವಾಗಿ ಹೊರಡಿಸುವ ಮಾಹಿತಿ ಹಾಗೂ ಪ್ರಕಟಣೆಗಳನ್ನು ಮಾತ್ರ ಆಧಾರವಾಗಿಟ್ಟುಕೊಳ್ಳಿ. ನಿಮ್ಮ ಆರೋಗ್ಯದ ರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.