ಉಡುಪಿ: ಶ್ರೀಕೃಷ್ಣ ಮಠದ ಪರ್ಯಾಯ ಶೀರೂರು ಮಠದ ಪೂರ್ವ ಯತಿಗಳಾದ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನೆ ಅಂಗವಾಗಿ ಮಂಗಳವಾರ ಶ್ರೀಕೃಷ್ಣ ಮಠದ ಭೋಜನಶಾಲೆಯಲ್ಲಿ ಪಲ್ಲಪೂಜೆ ಭಕ್ತಿಭಾವದಿಂದ ನೆರವೇರಿತು.
ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಪಲ್ಲಪೂಜೆಯಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು.
ಈ ಸಂದರ್ಭದಲ್ಲಿ ಮಠದ ಆಶ್ರಿತರು, ಭಕ್ತರು ಹಾಗೂ ಗಣ್ಯರು ಭಾಗವಹಿಸಿ ಪೂರ್ವ ಯತಿಗಳಿಗೆ ಭಕ್ತಿಪೂರ್ವಕವಾಗಿ ನಮನ ಸಲ್ಲಿಸಿದರು. ಕಾರ್ಯಕ್ರಮವು ಧಾರ್ಮಿಕ ವಾತಾವರಣದಲ್ಲಿ ಭಕ್ತಿಭಾವದಿಂದ ನಡೆಯಿತು.