ನೆಲಮಂಗಲ : ಕೆನಡಾ ದೇಶದಲ್ಲಿ ಕನ್ನಡಿಗನನ್ನ ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ಕೊಲೆ ಮಾಡಿರುವ ಆರೋಪಿ ಭಾವಚಿತ್ರ ಬಿಡುಗಡೆ ಮಾಡಲಾಗಿದೆ.
ಕೆನಡಾದ ಟೊರಂಟೊದಲ್ಲಿ ಬೆಂಗಳೂರು ಹೊರವಲಯ ನೆಲಮಂಗಲ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್ ಕೊಲೆಯಾಗಿದ್ದರು.ಚಂದನ್ ಕುಮಾರ್ ಕಳೆದ ಆರು ವರ್ಷಗಳಿಂದ ಕೆನಡಾದಲ್ಲಿ ಸಾಫ್ಟ್ರ್ ಎಂಜಿನಿಯರ್ ಆಗಿ ಕೆಲಸ ನಿರ್ವಹಿಸಿಕೊಂಡು ಅಲ್ಲಿನ ಕನ್ನಡಿಗರ ಸಂಘಟನೆಯ ಮೂಲಕ ಸಾಕಷ್ಟು ಹೆಸರು ಮಾಡಿದ್ದರು.
ಗುಂಡಿಟ್ಟು ಕೊಲೆ ಮಾಡಿರುವ ಆರೋಪಿ ವಿಚಾರದಲ್ಲಿ ಟೊರಂಟೊ ಪೊಲೀಸರು ಚಂದನ್ ಕುಮಾರ್ ಕೊಲೆಯ ಪಮಾಹಿತಿ ನೀಡಿದ್ದು ಇನ್ನೂ ತಲೆ ಮರೆಸಿಕೊಂಡಿರುವ ಆರೋಪಿ ಭಾವಚಿತ್ರ ಬಿಡುಗಡೆ ಮಾಡಿದ್ದಾರೆ. ಆರೋಪಿಯನ್ನು ಇಷಯಾ ಥಾಮಸ್ ಬಡೇರ್ 19 ವರ್ಷ ವಯಸ್ಸಿನ ವ್ಯಕ್ತಿ ಕೊಲೆ ಆರೋಪಿ ಎಂದು ಗುರುತಿಸಲಾಗಿದ್ದು, ಟೊರಂಟೊ ಪೊಲೀಸರಿಂದ ವಾಂಟೆಡ್ ಲಿಸ್ಟ್ ಫೋಟೋ ರಿಲೀಸ್ ಮಾಡಿದ್ದಾರೆ. ಸದ್ಯ ಕೊಲೆ ಆರೋಪಿಯನ್ನ ಇನ್ನೂ ಹುಡುಕಾಟ ನಡೆದಿದೆ. ಸದ್ಯ ಕೊಲೆ ಆರೋಪಿಗಾಗಿ ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ. ಪ್ರತ್ಯೇಕ ತಂಡಗಳನ್ನು ರಚಿಸಿ ಹುಡುಕಾಟ ನಡೆಸಿರುವ ಟೊರಂಟೆ ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.