2026-04-23 11:00:46

PM Modi talks to stop war meeting with four countries | ಯುದ್ಧ ನಿಲ್ಲಿಸಲು ಪಿಎಂ ಮೋದಿ ಮಾತುಕತೆ ನಾಲ್ಕು ದೇಶಗಳೊಡನೆ ಸಭೆ | Speed News Kannada

PM Modi talks to stop war meeting with four countries | ಯುದ್ಧ ನಿಲ್ಲಿಸಲು ಪಿಎಂ ಮೋದಿ ಮಾತುಕತೆ ನಾಲ್ಕು ದೇಶಗಳೊಡನೆ ಸಭೆ | Speed News Kannada

ನವದೆಹಲಿ: ಇರಾನ್, ಅಮೆರಿಕ ಹಾಗೂ ಇಸ್ರೇಲ್ ನಡುವಿನ ಯುದ್ಧದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಕತಾರ್, ಫ್ರಾನ್ಸ್, ಜೋರ್ಡಾನ್, ಓಮನ್ ಮತ್ತು ಮಲೇಷ್ಯಾ ನಾಯಕರೊಂದಿಗೆ ಮಾತನಾಡಿ ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಐವರು ನಾಯಕರೊಂದಿಗೆ ಪ್ರತ್ಯೇಕ ದೂರವಾಣಿ ಕರೆಗಳನ್ನು ನಡೆಸಿ ಮಾತನಾಡಿದ ಪ್ರಧಾನಿ ಮೋದಿ, ಸಂಘರ್ಷದಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ಪ್ರದೇಶದಲ್ಲಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ನಡೆದ ದಾಳಿಗಳನ್ನು ಅವರು ಖಂಡಿಸಿದರು. ಮಧ್ಯಪ್ರಾಚ್ಯದಲ್ಲಿ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಆದಷ್ಟು ಬೇಗ ಪುನಃಸ್ಥಾಪಿಸಲು ಸಂವಾದ ಮತ್ತು ರಾಜತಾಂತ್ರಿಕತೆಯ ಮೂಲಕ ಮುಂದುವರಿಯುವಂತೆ ಕರೆ ನೀಡಿದರು.
ಹಾರ್ಮುಜ್ ಜಲಸಂಧಿಯ ಮೂಲಕ ಸುರಕ್ಷಿತ ಮತ್ತು ಮುಕ್ತ ಸಂಚಾರವನ್ನು ಖಚಿತಪಡಿಸಿಕೊಳ್ಳುವ ಅಗತ್ಯತೆಯ ಬಗ್ಗೆಯೂ ಅವರು ಚರ್ಚಿಸಿದರು. ಕತಾ‌ರ್ ಅಮೀರ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗಿನ ಸಂಭಾಷಣೆಯ ಸಮಯದಲ್ಲಿ ಪ್ರಧಾನಿಯವರು, ನವದೆಹಲಿ ದೋಹಾದ ಬೆಂಬಲಕ್ಕೆ ನಿಂತಿದೆ ಮತ್ತು ಈ ಪ್ರದೇಶದ ಇಂಧನ ಮೂಲಸೌಕರ್ಯದ ಮೇಲಿನ ದಾಳಿಯನ್ನು ದೃಢವಾಗಿ ಖಂಡಿಸುತ್ತದೆ ಎಂದು ಹೇಳಿದರು.
ಜೋರ್ಡಾನ್ ರಾಜ ಅಬ್ದುಲ್ಲಾ ॥ ಅವರನ್ನು ತಮ್ಮ ಸಹೋದರ ಎಂದು ಕರೆದ ಮೋದಿ, ಅವರಿಗೆ ಮುಂಚಿತವಾಗಿ ಈದ್ ಶುಭಾಶಯಗಳನ್ನು ತಿಳಿಸಿದರು. ಭಾರತ ಮತ್ತು ಜೋರ್ಡಾನ್ ಸರಕು ಮತ್ತು ಇಂಧನದ ಸುಗಮ ಚಲನೆಯನ್ನು ಬೆಂಬಲಿಸುತ್ತವೆ ಎಂದು ಪ್ರಧಾನಿ ಹೇಳಿದರು. ಈ ಪ್ರದೇಶದಲ್ಲಿ ಸಿಲುಕಿರುವ ಭಾರತೀಯರ ಸುರಕ್ಷಿತ ವಾಪಸಾತಿಗೆ ಜೋರ್ಡಾನ್ ಮಾಡಿದ ಪ್ರಯತ್ನಗಳನ್ನು ನಾನು ತುಂಬಾ ಮೆಚ್ಚುತ್ತೇನೆ ಎಂದು ಅವರು ಹೇಳಿದರು. ಇದರೊಂದಿಗೆ ಪ್ರಧಾನಿ ಮೋದಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾತನಾಡಿದ್ದಾಗಿ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿ ಮತ್ತು ಉದ್ವಿಗ್ನತೆಯನ್ನು ಶಮನಗೊಳಿಸುವ ತುರ್ತು ಅಗತ್ಯತೆ ಹಾಗೂ ಸಂವಾದ ಮತ್ತು ರಾಜತಾಂತ್ರಿಕತೆಗೆ ಮರಳುವ ಬಗ್ಗೆ ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾತನಾಡಿದ್ದೇನೆ. ಈ ಪ್ರದೇಶ ಮತ್ತು ಅದರಾಚೆಗೆ ಶಾಂತಿ ಮತ್ತು ಸ್ಥಿರತೆಯನ್ನು ಮುನ್ನಡೆಸಲು ನಮ್ಮ ನಿಕಟ ಸಮನ್ವಯವನ್ನು ಮುಂದುವರಿಸಲು ನಾವು ಎದುರು ನೋಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.