2026-03-07 05:15:00

Prime Minister Modi unveils in Mann Ki Baat | ರಾಜ್ಯದ ಕೃಷಿಗೆ ಜಾಗತಿಕ ಮನ್ನಣೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಅನಾವರಣ | Speed News Kannada

Prime Minister Modi unveils in Mann Ki Baat | ರಾಜ್ಯದ ಕೃಷಿಗೆ ಜಾಗತಿಕ ಮನ್ನಣೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಅನಾವರಣ | Speed News Kannada

ಧಾರವಾಡ: "ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಕೃಷಿ ಉತ್ಪನ್ನಗಳು ಸೇರಿದಂತೆ ಭಾರತೀಯ ಕೃಷಿಗೆ ಜಾಗತಿಕ ಮನ್ನಣೆ ಕಲ್ಪಿಸಿಕೊಟ್ಟಿದ್ದಾರೆ. ಪರಿಣಾಮ ಇಂದು ರಾಜ್ಯದ ನಂಜನಗೂಡು ಬಾಳೆ, ಮೈಸೂರು ವೀಳ್ಯದೆಲೆ ಮತ್ತು ಇಂಡಿ ನಿಂಬೆಹಣ್ಣು ವಿದೇಶಿ ಪ್ರಸಿದ್ಧಿ ಪಡೆದಿವೆ" ಎಂದು ಕೇಂದ್ರ ಆಹಾರ ಮತ್ತು ನಾಗರಿಹ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಸಂತಸ ವ್ಯಕ್ತಪಡಿಸಿದರು.
ಪ್ರಧಾನಿ ಮೋದಿ ಅವರ 131ನೇ 'ಮನ್ ಕೀ ಬಾತ್' ಸಂಚಿಕೆ ವೀಕ್ಷಿಸಿ ಅಭಿಪ್ರಾಯ ಹಂಚಿಕೊಂಡರು.
ಮನ್ ಕೀ ಬಾತ್ ಅಲ್ಲಿ ಪ್ರಧಾನಿ ಮೋದಿ ಅವರು  ವಿಶೇಷವಾಗಿ ಕರ್ನಾಟಕದ ರೈತರ ಸಾಧನೆ ಬಗ್ಗೆ ತಿಳಿಸಿ ಶ್ಲಾಘಿಸಿದ್ದಾರೆ. ಮಾಲ್ಡೀವ್ಸ್ ಸೇರಿದಂತೆ ವಿದೇಶಗಳಲ್ಲಿ ಆಹಾರೋತ್ಪನ್ನದ ಸವಿರುಚಿ ಹೆಚ್ಚಿಸಿದ ರಾಜ್ಯದ ಅನ್ನದಾತರನ್ನು ಈ ಮೂಲಕ ಹುರಿದುಂಬಿಸುತ್ತಿದ್ದಾರೆ ಎಂದು ಜೋಶಿ ವ್ಯಾಖ್ಯಾನಿಸಿದರು.
ನಮ್ಮ ರಾಜ್ಯದ ಹೆಮ್ಮೆಯ GI ಮಾನ್ಯತೆ ಪಡೆದ ಉತ್ಪನ್ನಗಳಾದ ನಂಜನಗೂಡಿನ ಬಾಳೆಹಣ್ಣು, ಮೈಸೂರು ವೀಳ್ಯದೆಲೆ ಹಾಗೂ ಇಂಡಿಯ ನಿಂಬೆಹಣ್ಣು ವಿಶಿಷ್ಟ ರುಚಿ ಮತ್ತು ಉನ್ನತ ಗುಣಮಟ್ಟದಿಂದ ಕೂಡಿದ್ದು, ಇದೀಗ ವಾಯು ಮಾರ್ಗದ ಮೂಲಕ ಮಾಲ್ಡೀವ್ಸ್ ಸೇರಿದಂತೆ ಜಾಗತಿಕ ಮಾರುಕಟ್ಟೆಗಳಿಗೆ ರಫ್ತಾಗುತ್ತಿವೆ ಎಂದರು.
ಕರ್ನಾಟಕದ ರೈತರು ಕೇವಲ ಅಧಿಕ ಇಳುವರಿಗೆ ಸೀಮಿತವಾಗದೆ, ಗುಣಮಟ್ಟದ ಕೃಷಿಗೆ ಆದ್ಯತೆ ನೀಡುವ ಮೂಲಕ ಭಾರತೀಯ ಕೃಷಿ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆ ನೀಡುತ್ತಿದ್ದಾರೆ. ಜತೆಗೆ ಪ್ರಧಾನಿ ನರೇಂದ್ರ ಮೋದಿ ಅವರೂ ಈ ರಾಜ್ಯದ ರೈತರನ್ನು ಸದಾ ಪ್ರೋತ್ಸಾಹಿಸುತ್ತಿದ್ದಾರೆ ಎಂಬುದಕ್ಕೆ ಇಂದಿನ ಮನ್ ಕೀ ಬಾತ್ ನಿದರ್ಶನವಾಗಿದೆ ಎಂದು ಸಚಿವ ಜೋಶಿ ಪ್ರತಿಕ್ರಿಯಿಸಿದರು.
ಭಾಷಾ ವೈವಿಧ್ಯತೆ-ಸಂಪ್ರದಾಯಗಳ ವೈಭವ, ವಿಜ್ಞಾನ ಸಾಧನೆಗಳಿಂದ ದೇಶಿ ಪರಂಪರೆ, ವಿದೇಶಗಳಲ್ಲಿ ಭಾರತೀಯ ಸಂಸ್ಕೃತಿ-ರೈತರ ಪರಿಶ್ರಮದ ಅನಾವರಣ, ಸ್ತ್ರೀ ಶಕ್ತಿ-ಯುವ ಶಕ್ತಿ, ಯೋಗ-ಆಯುರ್ವೇದ, ಆರೋಗ್ಯ ಸಂದೇಶ, ಸ್ವಚ್ಛತೆ, ಸ್ವಾವಲಂಬನೆಯಿಂದ ಅಭಿವೃದ್ಧಿಶೀಲತೆವರೆಗೆ  ಹಾಗೂ ತ್ರಿವರ್ಣದ ಗರ್ವವರೆಗೆ ಇಡೀ ದೇಶ ಹೆಮ್ಮೆ ಪಡುವಂತೆ ಭಾರತದ ಅನೇಕ ಸಂಗತಿಗಳನ್ನು ಪ್ರಧಾನಿ ಮೋದಿ ಅವರು ಮನ್ ಕೀ  ಬಾತ್ ಮೂಲಕ ಪ್ರಸಾರಿಸುತ್ತಿದ್ದಾರೆ. ಈ ಶ್ರೇಷ್ಠ, ವಿಶಿಷ್ಠ ಕಾರ್ಯಕ್ರಮ ಆಲಿಸುವುದು ಎಲ್ಲರಿಗೂ ಪ್ರೇರಣದಾಯಕ ಅನುಭವವಾಗಿದೆ ಎಂದು ಸಚಿವ ಪ್ರಹ್ಲಾದ ಜೋಶಿ ಅಭಿಪ್ರಾಯಪಟ್ಟರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.