ಸಕಲೇಶಪುರ ತಾಲೂಕಿನ ಎಡಕುಮೇರಿ–ಶಿರಬಾಗಿಲು ರೈಲು ಮಾರ್ಗದಲ್ಲಿ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುವನ್ನು ಸಚಿನ್ (36) ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ ತಲೆ, ಎದೆ ಮತ್ತು ಮುಖಕ್ಕೆ ಗಂಭೀರ ಗಾಯಗಳಾಗಿವೆ. ತಕ್ಷಣವೇ ಸಹೋದ್ಯೋಗಿಗಳು ಅವರನ್ನು ಸಕಲೇಶಪುರ ತಾಲೂಕ್ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಹಾಸನ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.ಘಟನೆ ಸಂಬಂಧ ರೈಲ್ವೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.