ನಟಸಾರ್ವಭೌಮ ವರನಟ ಡಾ. ರಾಜ್ಕುಮಾರ್ ಅವರಿಗೆ 97ನೇ ವರ್ಷದ ಜನ್ಮದಿನ. 97ನೇ ಜಯಂತಿ ಆಚರಿಸಲು ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆಗಳು ನಡೆದಿದೆ. ಹೂವಿನ ಅಲಂಕಾರದಿಂದ ಸಮಾಧಿ ಸಿದ್ಧವಾಗಿದೆ. ಇಂದು ರಾಜ್ ಕುಟುಂಬದಿಂದ ಸಮಾಧಿಗೆ ಪೂಜೆ ಸಲ್ಲಿಸಲಾಗುತ್ತದೆ. ನಂತರ ಅವರ 97ನೇ ವರ್ಷದ ಜನ್ಮದಿನ ಆಚರಣೆ ಮಾಡಲಾಗುತ್ತದೆ. ಡಾ. ರಾಜ್ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ಕಂಠೀರವ ಸ್ಟೂಡಿಯೋದ ಮುಂದೆ ಜನಸಾಗರವೆ ನಿರ್ಮಾಣವಾಗಿದೆ. ಸಮಾಧಿಗೆ ಕೆ. ಗೋಪಾಲಯ್ಯರವರು ಪೂಜೆ ಸಲ್ಲಿಸಿದ್ದು, ಮುಖ್ಯ ಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಶೋಭಾ ಕರಂದ್ಲಾಜೆ ರವರು ಸಹ ಭಾಗಿ ಆಗಲಿದ್ದಾರೆ ಎನ್ನಲಾಗಿದೆ.