2026-03-18 01:44:40

Rashmika Mandanna returned to work within days of her marriage | ಮದುವೆ ಮುಗಿಸಿ ಕೆಲವೇ ದಿನಗಳಲ್ಲಿ ಕೆಲಸಕ್ಕೆ ಮರಳಿದ ರಶ್ಮಿಕಾ ಮಂದಣ್ಣ | Speed News kannada

Rashmika Mandanna returned to work within days of her marriage | ಮದುವೆ ಮುಗಿಸಿ ಕೆಲವೇ ದಿನಗಳಲ್ಲಿ ಕೆಲಸಕ್ಕೆ ಮರಳಿದ ರಶ್ಮಿಕಾ ಮಂದಣ್ಣ | Speed News kannada

ಪ್ಯಾನ್ ಇಂಡಿಯಾ ಸ್ಮಾರ್ ಆಗಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಜೊತೆ ಕೆಲವೇ ದಿನಗಳ ಹಿಂದೆ ಅದ್ದೂರಿಯಾಗಿ ಮದುವೆಯಾದರು. ವಿವಾಹದ ಸಂಭ್ರಮದ ನಂತರ ಈ ಜೋಡಿ ಈಗ ಮತ್ತೆ ಕೆಲಸದ ಕಡೆಗೆ ಗಮನ ಹರಿಸಿದ್ದಾರೆ. ಮದುವೆಯ ನಂತರ ಈ ಜೋಡಿ 'ರಣಬಾಲಿ' ಚಿತ್ರದ ಶೂಟಿಂಗ್ ಆರಂಭಿಸಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ರಶ್ಮಿಕಾ ಮಂದಣ್ಣ ಅವರಯ 'ಮೈಸಾ' ಚಿತ್ರದ ಶೂಟಿಂಗ್ ಆರಂಭಿಸಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ. ಮಾರ್ಚ್ 17ರಂದು ರಶ್ಮಿಕಾ ಮಂದಣ್ಣ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹೊಸ ಅಪ್‌ಡೇಟ್ ಒಂದನ್ನು ಹಂಚಿಕೊಂಡಿದ್ದಾರೆ. ರವೀಂದ್ರ ಪುಲ್ಲೆ ನಿರ್ದೇಶನದ 'ಮೈಸಾ' ಚಿತ್ರದ ಚಿತ್ರೀಕರಣಕ್ಕೆ ಅವರು ಮರಳಿದ್ದಾರೆ. ಮರುಭೂಮಿಯಂತಹ ಪ್ರದೇಶದಲ್ಲಿ ಚಿತ್ರತಂಡ ಕಷ್ಟಪಟ್ಟು ಕೆಲಸ ಮಾಡುತ್ತಿರುವ ಫೋಟೋವನ್ನು ಹಂಚಿಕೊಂಡಿರುವ ನಿರ್ದೇಶಕರು, 'ದಿ ಹಂಟ್ ಬಿಗಿನ್ಸ್' ಎಂದು ಬರೆದುಕೊಂಡಿದ್ದಾರೆ. ರಶ್ಮಿಕಾ ಈ ಪೋಸ್ಟ್ ರೀ-ಶೇರ್ ಮಾಡುವ ಮೂಲಕ ತಾವು ಕೆಲಸಕ್ಕೆ ಹಾಜರಾಗಿರುವುದನ್ನು ಖಚಿತಪಡಿಸಿದ್ದಾರೆ. ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಫೆಬ್ರವರಿ 26ರಂದು ಖಾಸಗಿ ಹೋಟೆಲ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮಾರ್ಚ್ 4ರಂದು ಚಿತ್ರರಂಗದ ಗಣ್ಯರಿಗಾಗಿ ಅದ್ದೂರಿ ರಿಸೆಪ್ಪನ್ ಹಮ್ಮಿಕೊಳ್ಳಲಾಗಿತ್ತು. ಇದಾದ ನಂತರ ಹನಿಮೂನ್‌ಗೆ ತೆರಳಿದ್ದ ಈ ಜೋಡಿ, ಈ ವಾರವಷ್ಟೇ ಹಿಂದಿರುಗಿದ್ದು ತಕ್ಷಣವೇ ತಮ್ಮ ವೃತ್ತಿಜೀವನದ ಕಡೆಗೆ ಮುಖ ಮಾಡಿದ್ದಾರೆ.
2026ರಲ್ಲಿ ಬಿಡುಗಡೆ ಆಗಲಿರುವ ಬಹುನಿರೀಕ್ಷಿತ ಚಿತ್ರಗಳಲ್ಲಿ 'ಮೈಸಾ' ಕೂಡ ಇದೆ. ಈ ಚಿತ್ರದಲ್ಲಿ ರಶ್ಮಿಕಾ ಅವರು ಈ ಹಿಂದೆ ಎಂದೂ ಕಾಣಿಸಿಕೊಳ್ಳದಂತಹ ಆಕ್ರೋಶಭರಿತ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಅವರ ವೃತ್ತಿಜೀವನಕ್ಕೆ ಈ ಸಿನಿಮಾ ಹೊಸ ತಿರುವು ನೀಡುವ ಸಾಧ್ಯತೆಯಿದೆ. ಈಗಾಗಲೇ ಬಿಡುಗಡೆ ಆಗಿರುವ ಅವರ ಫಸ್ಟ್ ಲುಕ್ ಟೀಸರ್ ಗಮನ ಸೆಳೆದಿದೆ. ಸದ್ಯಕ್ಕೆ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜೊತೆಯಾಗಿ ನಟಿಸಲಿರುವ 'ರಣಬಾಲಿ' ಚಿತ್ರಕ್ಕಿಂತ ಮುಂಚಿತವಾಗಿ 'ಮೈಸಾ' ಚಿತ್ರದ ಶೂಟಿಂಗ್ ಮುಗಿಯಲಿದೆ. 'ಗೀತ ಗೋವಿಂದಂ' ಮತ್ತು 'ಡಿಯರ್ ಕಾಡ್' ಸಿನಿಮಾದಲ್ಲಿ ಜೊತೆಯಾಗಿದ್ದ ಈ ಜೋಡಿ 'ರಣಬಾಲಿ' ಸಿನಿಮಾದಲ್ಲಿ ಮತ್ತೆ ಒಂದಾಗುತ್ತಿರುವುದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.