2026-03-07 06:35:33

Siddaramaiah arrives at actor Dushyants reception | ನಟ ದುಷ್ಯಂತ್‌ ಆರತಕ್ಷತೆ ಕಾರ್ಯಕ್ರಮಕ್ಕೆ ಬಂದು ಶುಭ ಕೋರಿದ ಸಿದ್ದರಾಮಯ್ಯ | Speed News Kannada

Siddaramaiah arrives at actor Dushyants reception | ನಟ ದುಷ್ಯಂತ್‌ ಆರತಕ್ಷತೆ ಕಾರ್ಯಕ್ರಮಕ್ಕೆ ಬಂದು ಶುಭ ಕೋರಿದ ಸಿದ್ದರಾಮಯ್ಯ | Speed News Kannada

ಇತ್ತೀಚೆಗೆ ಹಸೆಮಣೆ ಏರಿರುವ ನಟ ದುಷ್ಯಂತ್ ಮತ್ತು ರಚನಾ ಅವರು ಬೆಂಗಳೂರಿನಲ್ಲಿ ಆರತಕ್ಷತೆ ಕಾರ್ಯಕ್ರಮ ಮಾಡಿದ್ದಾರೆ. ಸಿನಿಮಾ, ರಾಜಕೀಯ ಮುಂತಾದ ಕ್ಷೇತ್ರಗಳ ಅನೇಕ ಗಣ್ಯರು ಆಗಮಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯದ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ಆರತಕ್ಷತೆ ಕಾರ್ಯಕ್ರಮಕ್ಕೆ ಬಂದಿದ್ದಾರೆ.
ಅವರ ಆಗಮನದಿಂದ ದುಷ್ಯಂತ್ ಮತ್ತು ರಚನಾ ಖುಷಿಯಾಗಿದ್ದಾರೆ. ಬಹಳ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಮಾತ್ರವಲ್ಲದೇ ಡಿಕೆ ಸುರೇಶ್, ಆರ್. ಅಶೋಕ ಮುಂತಾದ ಗಣ್ಯರು ಆರಕ್ಷತೆಗೆ ಬಂದು ಶುಭಕೋರಿದ್ದಾರೆ. ದುಷ್ಯಂತ್ ಅವರು ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ಪುತ್ರ. ಹಾಗಾಗಿ ರಾಜಕೀಯ ಕ್ಷೇತ್ರದ ಹಲವರು ಈ ಮದುವೆಗೆ ಹಾಜರಿ ಹಾಕಿದ್ದಾರೆ. ಫೋಟೋಗಳು ವೈರಲ್ ಆಗಿವೆ. 'ಗತ ವೈಭವ' ಸಿನಿಮಾದ ಮೂಲಕ ದುಷ್ಯಂತ್ ಅವರು ಗುರುತಿಸಿಕೊಂಡಿದ್ದಾರೆ. ಸಿಂಪಲ್ ಸುನಿ ನಿರ್ದೇಶನದ ಆ ಸಿನಿಮಾ 2025ರಲ್ಲಿ ಬಿಡುಗಡೆ ಆಗಿತ್ತು. ಬಳಿಕ ಒಟಿಟಿಯಲ್ಲೂ ಮೆಚ್ಚುಗೆ ಪಡೆಯಿತು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.