2026-06-25 02:06:38

Stones pelted on Vande Bharat train | ಮೋಹನ್ಭಾ ಗವತ್‌ ಪ್ರಯಾಣಿಸುತ್ತಿದ್ದ ವಂದೇ ಭಾರತ್‌ ರೈಲಿನ ಮೇಲೆ ಕಲ್ಲು ತೂರಾಟ | Speed News Kannada

Stones pelted on Vande Bharat train | ಮೋಹನ್ಭಾ ಗವತ್‌ ಪ್ರಯಾಣಿಸುತ್ತಿದ್ದ ವಂದೇ ಭಾರತ್‌ ರೈಲಿನ ಮೇಲೆ ಕಲ್ಲು ತೂರಾಟ | Speed News Kannada

ನವದೆಹಲಿ: ಉತ್ತರ ಪ್ರದೇಶದ ಹರ್ಡೋಯಿ ಜಿಲ್ಲೆಯಲ್ಲಿ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಈ ವೇಳೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಇದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.ವಾರಣಾಸಿ-ಮೇರಟ್ ಮಾರ್ಗದಲ್ಲಿ ಸಂಚರಿಸುತ್ತಿದ್ದ ರೈಲು ಹರ್ಡೋಯಿ ಜಿಲ್ಲೆಯ ಕೌಧಾ ಗ್ರಾಮದ ಸಮೀಪ ಮಧ್ಯಾಹ್ನ ವೇಳೆಯಲ್ಲಿ ಕಲ್ಲು ತೂರಾಟಕ್ಕೆ ಗುರಿಯಾಯಿತು. ಈ ಘಟನೆಯಿಂದ ರೈಲಿನ ಒಂದು ಬೋಗಿಯ ಕಿಟಕಿ ಗಾಜು ಹಾನಿಗೊಳಗಾಗಿದೆ.
ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ. ಮೋಹನ್ ಭಾಗವತ್ ಸಂಪೂರ್ಣ ಸುರಕ್ಷಿತರಾಗಿದ್ದು, ಬಳಿಕ ಭದ್ರತೆಯ ನಡುವೆ ತಮ್ಮ ಗಮ್ಯಸ್ಥಾನಕ್ಕೆ ತಲುಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ ರೈಲು ಹಾದು ಹೋಗುವ ವೇಳೆ ಹಳಿಯ ಬಳಿಯಲ್ಲಿ ಕೆಲವರು ಕಲ್ಲು ಎಸೆದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದ್ದು, ಪ್ರಕರಣದ ಕುರಿತು ರೈಲ್ವೆ ರಕ್ಷಣಾ ಪಡೆ (RPF) ಹಾಗೂ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಈ ಘಟನೆ ವಂದೇ ಭಾರತ್ ರೈಲುಗಳ ಸುರಕ್ಷತೆ ಕುರಿತು ಮತ್ತೆ ಆತಂಕವನ್ನು ಉಂಟುಮಾಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.