2026-04-23 11:03:16

The pre-release event of the film Elra Kaleliyatte Kaala was held with great fanfare | ಅದ್ದೂರಿಯಾಗಿ ನೆರವೇರಿದ ಎಲ್ರ ಕಾಲೆಳಿಯತ್ತೆ ಕಾಲ ಚಿತ್ರದ ಪ್ರೀ ರಿಲೀಸ್‌ ಇವೆಂಟ್‌ | Speed news kannada

The pre-release event of the film Elra Kaleliyatte Kaala was held with great fanfare | ಅದ್ದೂರಿಯಾಗಿ ನೆರವೇರಿದ ಎಲ್ರ ಕಾಲೆಳಿಯತ್ತೆ ಕಾಲ ಚಿತ್ರದ ಪ್ರೀ ರಿಲೀಸ್‌ ಇವೆಂಟ್‌ | Speed news kannada

ಸುಜಯ್ ಶಾಸ್ತ್ರಿ ನಿರ್ದೇಶನದ  90 ರ ಕಾಲಘಟ್ಟದ ಕಥಾಹಂದರ ಹೊಂದಿರುವ ಈ ಚಿತ್ರ ಏಪ್ರಿಲ್ 24 ರಂದು ಬಿಡುಗಡೆಯಾಗಲಿದೆ. ಸುಜಯ್ ಶಾಸ್ತ್ರಿ ನಿರ್ದೇಶನದ, ಗೋಕುಲ ಎಂಟರ್ಟೈನರ್ಸ್ ಲಾಂಛನದಲ್ಲಿ ಗೋವಿಂದರಾಜು ಅವರು ನಿರ್ಮಿಸಿರುವ ಹಾಗೂ ಚಂದನ್ ಶೆಟ್ಟಿ ನಾಯಕನಾಗಿ  ನಟಿಸಿರುವ ಮೊದಲ ಚಿತ್ರ "ಎಲ್ರ ಕಾಲೆಳಿಯತ್ತೆ ಕಾಲ". ಇತ್ತೀಚೆಗೆ ನಡೆದ ಈ ಚಿತ್ರದ ಪ್ರೀ ರಿಲೀಸ್ ಇವೆಂಟ್ ನಲ್ಲಿ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾತನಾಡಿದರು.

ಇಡೀ ಚಿತ್ರತಂಡದ ಸದಸ್ಯರ ಸಹಕಾರದಿಂದ ನಮ್ಮ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಏಪ್ರಿಲ್ 17 ಕ್ಕೆ ಬಿಡುಗಡೆಯಾಗಬೇಕಾಗಿದ್ದ ನಮ್ಮ ಚಿತ್ರ ಕಾರಣಾಂತರದಿಂದ ಒಂದು ವಾರ ತಡವಾಗಿ ಏಪ್ರಿಲ್ 24 ರಂದು ಬಿಡುಗಡೆಯಾಗುತ್ತಿದೆ. ಚಿತ್ರ ಎಲ್ಲರಿಗೂ ಪ್ರಿಯವಾಗುವ ಭರವಸೆ ಇದೆ ಎಂದು ನಿರ್ದೇಶಕ ಸುಜಯ್ ಶಾಸ್ತ್ರಿ ಹೇಳಿದರು. ಈಗಾಗಲೇ ಚಿತ್ರದ ಕುರಿತು ಸಾಕಷ್ಟು ಮಾತನಾಡಿದ್ದೇನೆ. ಈಗ ಹೇಳಬೇಕಿರುವುದು ನಮ್ಮ ಚಿತ್ರ ಒಂದು ವಾರ ತಡವಾಗಿ ಅಂದರೆ , ಏಪ್ರಿಲ್ 24 ರಂದು ಬಿಡುಗಡೆಯಾಗುತ್ತಿದೆ. ನಮ್ಮೆಲ್ಲರ ಆರಾಧ್ಯ ದೈವ ವರನಟ ಡಾ||ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಬಿಡುಗಡೆಯಾಗುತ್ತಿರುವುದು ಬಹಳ ಖುಷಿಯಾಗಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಚಂದನ್ ಶೆಟ್ಟಿ.  

ಈ ಚಿತ್ರದಲ್ಲಿ ನನ್ನದು ಗಮನಾರ್ಹ ಪಾತ್ರ ಎಂದು ಮಾತನಾಡಿದ ನಟಿ ತಾರಾ ಅನುರಾಧ, ಸುಜಯ್ ಶಾಸ್ತ್ರಿ ಹಾಗೂ ರಾಜ್ ಗುರು ಹೊಸಕೋಟೆ  ರಂಗಭೂಮಿಯಿಂದ ಪರಿಚಿತರು. ಚಂದನ್ ಶೆಟ್ಟಿ ಹಾಗೂ ಅವರು ತಂದೆ - ತಾಯಿ ಕೂಡ ಪರಿಚಯ. ಇನ್ನೂ, ಅರ್ಚನಾ ಕೊಟ್ಟಿಗೆ ನಾನು ಇಷ್ಟ ಪಡುವ ನಾಯಕಿ.‌ ಒಂದೊಳ್ಳೆ ತಂಡ ಸೇರಿ ಉತ್ತಮ ಚಿತ್ರ ಮಾಡಿದ್ದಾರೆ. ಹಾಡುಗಳು ಚೆನ್ನಾಗಿದೆ.  ಇದೇ ಏಪ್ರಿಲ್ 24, ಡಾ||ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಈ ಚಿತ್ರ ತೆರೆಗೆ ಬರಲಿದೆ. ಎಲ್ಲರೂ ಚಿತ್ರಮಂದಿರಗಳಲ್ಲೇ ಈ ಚಿತ್ರವನ್ನು ನೋಡುವ ಮೂಲಕ ಪ್ರೋತ್ಸಾಹ ನೀಡಿ ಎಂದರು. ಇಡೀ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿ ಮಾತನಾಡಿದ ನಿರ್ಮಾಪಕ ಗೋವಿಂದರಾಜು, ಚಂದನ್ ಫಿಲಂಸ್ ನಮ್ಮ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ ಎಂದರು.   ನಾಯಕಿ ಅರ್ಚನಾ ಕೊಟ್ಟಿಗೆ ಸಹ ಎಲ್ಲರಿಗೂ ಧನ್ಯವಾದ ಹೇಳಿದರು. ನಟರಾದ ರಜನಿಕಾಂತ್, ಅನಂತ ಪದ್ಮನಾಭ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ವಿತರಣೆಯ ಬಗ್ಗೆ ಚಂದನ್ ಫಿಲಂಸ್ ನ ಕುನಾಲ್ ಮಾತನಾಡಿದರು. ನಿರ್ಮಾಪಕರ ಸ್ನೇಹಿತರಾದ ಶ್ರೀನಿವಾಸ್, ಶಂಕರ್ ಅವರು ಚಿತ್ರಕ್ಕೆ ಯಶಸ್ಸನ್ನು ಕೋರಿದರು. ಉಷಾ ಗೋವಿಂದರಾಜು ಅವರು ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಪ್ರವೀಣ್ - ಪ್ರದೀಪ್ ಸಂಗೀತ ನಿರ್ದೇಶನ ಹಾಗೂ ವಿಶ್ವಜಿತ್ ರಾವ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರಾಜ್ ಗುರು ಹೊಸಕೋಟೆ ಕಥೆ ಬರೆದಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.